![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 2, 2021, 2:45 PM IST
ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ಏಳು ಮಂದಿ ನಾಗರಿಕರು ಗಾಯಗೊಂಡಿರುವ ಘಟನೆ ಶನಿವಾರ(ಜನವರಿ 02) ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಎಲ್ಲರು ಅಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾರೆ.
ಗ್ರನೇಡ್ ದಾಳಿ ನಡೆದ ಕೂಡಲೇ ಭದ್ರತಾ ಪಡೆ ಕೂಡಲೇ ಇಡೀ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ಭದ್ರತಾ ಪಡೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಹುಬ್ಬಳ್ಳಿ: ಸಚಿವ ಜಗದೀಶ್ ಶೆಟ್ಟರ್ ಸಮೀಪವೇ ಕುಸಿದ ಮಣ್ಣಿನ ದಿಬ್ಬ! ಪಾರಾದ ಸಚಿವರು
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಲು ಯತ್ನಿಸುತ್ತಿದ್ದು, ಭದ್ರತಾ ಪಡೆ ಅದನ್ನು ವಿಫಲಗೊಳಿಸುತ್ತಿವೆ. ಅಲ್ಲದೇ ಸತತ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಕೆಲವು ಉಗ್ರರು ಬಲಿಯಾಗಿರುವುದಾಗಿ ವರದಿ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.