ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಸಂಸತ್ನಲ್ಲಿ ಮಸೂದೆ ಮಂಡನೆ
Team Udayavani, Mar 11, 2017, 3:45 AM IST
ನವದೆಹಲಿ: ಶಾಲೆಗಳಲ್ಲಿ ಭಗವದ್ಗೀತೆ ಪಾಠ ಕಡ್ಡಾಯ ಮಸೂದೆಯನ್ನು ಲೋಕಸಭೆಯಲ್ಲಿ ಶುಕ್ರವಾರ ಪರಿಚಯಿಸಲಾಗಿದೆ.
ಬಿಜೆಪಿ ಸಂಸದ ರಮೇಶ್ ಬಿಧೂರಿ ಅವರು 103 ಖಾಸಗಿ ಸದಸ್ಯರ ಭಗವದ್ಗೀತೆ ಪಾಠ ಕಡ್ಡಾಯ ಮಸೂದೆ ಮಂಡಿಸಿದರು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿಯೇ ಭಗವದ್ಗೀತೆಯನ್ನು ಪ್ರತಿಯೊಂದು ಶಾಲೆಗಳಲ್ಲಿ ಕಡ್ಡಾಯಗೊಳಿಸಬೇಕೆನ್ನುವ ಮಾತುಗಳು ಕೇಳಿಬಂದಿತ್ತು. ಇದೀಗ ಮಸೂದೆ ಪರಿಚಯಿಸಲಾಗಿದ್ದು, ಇನ್ನಷ್ಟೇ ಅಂಗೀಕಾರಗೊಳ್ಳಬೇಕಿದೆ. ಇದೇ ವೇಳೆ ಬಿಜೆಪಿಯ ಸಂಸದ ಮಹೈಶ್ ಗಿರ್ರಿ ಶುಚಿತ್ವ ನಿರ್ವಹಣಾ ಮಸೂದೆ ಮಂಡಿಸಿದರು.
ಶತ್ರು ಆಸ್ತಿ ಕಾಯ್ದೆಗೆ ತಿದ್ದುಪಡಿ
ನವದೆಹಲಿ: ವಿರೋಧ ಪಕ್ಷಗಳ ಸಭಾತ್ಯಾಗದ ನಡುವೆಯೇ 49 ವರ್ಷದ ಹಳೆಯ “ಶತ್ರು ಆಸ್ತಿ ಕಾಯ್ದೆ’ಗೆ ರಾಜ್ಯಸಭೆ ತಿದ್ದುಪಡಿ ತಂದಿದೆ. ಭಾರತದಲ್ಲಿನ ಆಸ್ತಿಯನ್ನು ತೊರೆದು ಪಾಕಿಸ್ತಾನ, ಚೀನಾಕ್ಕೆ ವಲಸೆ ಹೋಗಿರುವ ವ್ಯಕ್ತಿಗಳ ಆಸ್ತಿಯ ಮೇಲೆ ಅಧಿಕಾರ ಹೊಂದಲು ಈ ಶತ್ರು ಆಸ್ತಿ ಕಾಯ್ದೆ ನೆರವಾಗಲಿದೆ.
ಈ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರ 5 ಬಾರಿ ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು. ಪ್ರತಿಪಕ್ಷಗಳು ಆಗಲೂ ವಿರೋಧ ವ್ಯಕ್ತಪಡಿಸಿದ್ದವು. ರಾಷ್ಟ್ರಪತಿ ಪ್ರಣಬ್ ಕೂಡ ಈ ಕುರಿತು ಕೆಲವು ಪ್ರಶ್ನೆಗಳನ್ನೆತ್ತಿದ್ದರು. ಆಸ್ತಿಯ ಹಕ್ಕುದಾರ ಬದುಕಿದ್ದಾನೋ ಅಥವಾ ಮರಣ ಹೊಂದಿದ್ದಾನೋ ಎಂಬುದನ್ನು ಪರಿಗಣಿಸದೆ ಆಸ್ತಿಯನ್ನು ಪರಭಾರೆ ಮಾಡುವ ಅವಕಾಶ ಈ ಕಾಯ್ದೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.