![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 12, 2017, 3:45 AM IST
ಹೊಸದಿಲ್ಲಿ: ಅಪನಗದೀಕರಣ ಕುರಿತಂತೆ ಕೇಂದ್ರದ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂತಹ ದ್ದೊಂದು ಕೆಟ್ಟ ನಿರ್ಧಾರ ತೆಗೆದುಕೊಂಡ ಕಾರಣಕ್ಕೆ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ದೇಶದ ಪ್ರಧಾನಿಯೊಬ್ಬರ ಬಗ್ಗೆ ಲೇವಡಿ ಮಾಡಲಾಗುತ್ತಿದೆ ಎಂದು ಕುಟುಕಿದ್ದಾರೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ “ಅಚ್ಛೇ ದಿನ್’ ಘೋಷಣೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟಾಂಗ್ ನೀಡಿರುವ ರಾಹುಲ್, 2019ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ “ಅಚ್ಛೇ ದಿನ್’ ಬರುತ್ತವೆ ಎಂದು ಹೇಳಿದ್ದಾರೆ.
ನೋಟು ರದ್ದತಿ ವಿರುದ್ಧ ಪಕ್ಷ ಬುಧವಾರ ಆಯೋ ಜಿಸಿದ್ದ “ಜನ ವೇದನೆ’ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವದ ಪ್ರತಿಯೊಬ್ಬ ಹಣಕಾಸು ತಜ್ಞರು ಕೂಡ ಮೋದಿ ತೆಗೆದುಕೊಂಡ ಕ್ರಮ ತಪ್ಪು ಗ್ರಹಿಕೆಯ ನಿರ್ಧಾರ ಎಂದು ಲೇವಡಿ ಮಾಡುತ್ತಿದ್ದಾರೆ ಎಂದರು.
ದೇಶಕ್ಕಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ ಅವರು, ರಿಸರ್ವ್ ಬ್ಯಾಂಕ್ ಹಾಗೂ ನ್ಯಾಯಾಂಗವನ್ನು ಗುರಿಯಾಗಿಸಿಕೊಂಡು ಬಿಜೆಪಿ ಎರಡೂವರೆ ವರ್ಷ ಗಳಲ್ಲಿ ಏನೇನನ್ನು ಮಾಡಿದೆಯೋ ಅದನ್ನು 70 ವರ್ಷಗಳಿಂದಲೂ ಕಾಂಗ್ರೆಸ್ ಮಾಡಿಲ್ಲ. ಬಿಜೆಪಿ, ಆರ್ಎಸ್ಎಸ್ ಹಾಗೂ ಮೋದಿ ಅವರು ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಟ್ಟಿದ ಆರ್ಬಿಐ, ನ್ಯಾಯಾಂಗ ಹಾಗೂ ಚುನಾವಣಾ ಆಯೋಗದಂತಹ ಸಂಸ್ಥೆಗಳನ್ನು ದುರ್ಬಲಗೊಳಿಸಿವೆ ಎಂದು ಕಿಡಿಕಾರಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.