![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 23, 2020, 6:05 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆಯ ಆತಂಕ ಎದುರಾಗಿರುವಾಗಲೇ, ದೇಶೀಯ ಲಸಿಕೆ ಕೋವ್ಯಾಕ್ಸಿನ್ ಬಗ್ಗೆ ಮತ್ತಷ್ಟು ಆಶಾಭಾವ ಮೂಡಿದೆ. ಈ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಭಾರತ್ ಬಯೋಟೆಕ್, ಸಿಹಿ ಸುದ್ದಿಯೊಂದನ್ನು ನೀಡಿದ್ದು, ಈ ಲಸಿಕೆ ಶೇ.60ರಷ್ಟು ಪರಿಣಾಮಕಾರಿ ಎಂದು ಹೇಳಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳಿಗಿಂತಲೂ ಇದು ಹೆಚ್ಚೇ ಇದೆ ಎಂದೂ ಭಾರತ್ ಬಯೋಟೆಕ್ನ ಗುಣಮಟ್ಟ ಕಾರ್ಯಾಚರಣೆಯ ಅಧ್ಯಕ್ಷ ಸಾಯಿ ಡಿ ಪ್ರಸಾದ್ ಹೇಳಿದ್ದಾರೆ. ಸದ್ಯ ಈ ಲಸಿಕೆಯ ಪ್ರಯೋಗ ನಡೆಸುತ್ತಿದ್ದು, ಇದರ ದತ್ತಾಂಶಗಳನ್ನು ಪರಿಶೀಲಿಸಿದ ಅನಂತರ ಶೇ.60ರಷ್ಟು ಪರಿಣಾಮಕಾರಿ ಎಂಬುದು ಗೊತ್ತಾಗಿದೆ. ಜಾಗತಿಕ ಸಂಸ್ಥೆಗಳ ಪ್ರಕಾರ ಶೇ.50ರಷ್ಟು ಪರಿಣಾಮಕಾರಿಯಾಗಿದ್ದರೆ ಸಾಕು. ಆದರೆ, ಇದನ್ನು ಮೀರಿದ ಫಲಿತಾಂಶ ಸಿಗುತ್ತಿದೆ ಎಂದರು.
ಈ ಮಧ್ಯೆ, ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ತಂಡಗಳು ಪಂಜಾಬ್, ಹಿಮಾಚಲ ಪ್ರದೇಶ ಉತ್ತರ ಪ್ರದೇಶಕ್ಕೆ ತೆರಳಿವೆ. ಕಳೆದ ವಾರವಷ್ಟೇ ರಾಜಸ್ಥಾನ, ಹರಿಯಾಣ, ಗುಜರಾತ್ ಮತ್ತು ಮಣಿಪುರಕ್ಕೆ ತೆರಳಿದ್ದವು.
ಅತ್ತ ಇಂಗ್ಲೆಂಡ್ನಲ್ಲಿ ಈಗಾಗಲೇ ಘೋಷಣೆಯಾಗಿರುವ ಲಾಕ್ಡೌನ್ ಡಿ.2ಕ್ಕೆ ಮುಗಿಯಲಿದ್ದು, ಬಳಿಕ ಜನರಿಗೆ ಕಠಿನ ನಿಯಮಗಳನ್ನು ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತುರ್ತು ದೃಢೀಕರಣ?: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸುತ್ತಿರುವ ಆಕ್ಸ್ಫರ್ಡ್ ಲಸಿಕೆಗೆ ಭಾರತದಲ್ಲಿ ತುರ್ತು ದೃಢೀಕರಣ ಸಿಗುವ ಸಾಧ್ಯತೆ ಇದೆ. ಬ್ರಿಟನ್ನಲ್ಲಿ ಒಪ್ಪಿಗೆ ಸಿಕ್ಕಿದರೆ, ಇಲ್ಲಿ ಈ ಲಸಿಕೆಗೂ ಒಪ್ಪಿಗೆ ನೀಡಬಹುದು ಎಂದು ನೀತಿ ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.