Bypoll; 13 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ ಚುನಾವಣಾ ಆಯೋಗ
Team Udayavani, Jun 10, 2024, 4:09 PM IST
ಹೊಸದಿಲ್ಲಿ: ಏಳು ರಾಜ್ಯಗಳಲ್ಲಿ 13 ಸ್ಥಾನಗಳಿಗೆ ವಿಧಾನಸಭಾ ಉಪಚುನಾವಣೆ ನಡೆಸುವ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ.
ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲವು ಹಾಲಿ ಶಾಸಕರು ತಮ್ಮ ಸ್ಥಾನಗಳನ್ನು ತೆರವು ಮಾಡಿದ ಕಾರಣದಿಂದ ಹಲವೆಡೆ ಚುನಾವಣೆ ನಡೆಯುತ್ತಿದೆ.
ಜೂನ್ 14 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಮತ್ತು ನಾಮಪತ್ರಗಳ ಪರಿಶೀಲನೆ ಜೂನ್ 26 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ. ಜುಲೈ 10 ರಂದು ಮತದಾನ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.
ಬಿಹಾರದ ರುಪೌಲಿ, ರಾಯ್ ಗಂಜ್ ರಣಘಾಟ್ ದಕ್ಷಿಣ್, ಪಶ್ಚಿಮ ಬಂಗಾಳದ ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಾಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್ ನ ಜಲಂಧರ್ ಪಶ್ಚಿಮ ಮತ್ತು ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್ಪುರ ಮತ್ತು ನಲಗಢದಲ್ಲಿ ಉಪ ಚುನಾವಣೆ ನಡೆಯಲಿದೆ.
ರುಪೌಲಿಯಲ್ಲಿ ಜೆಡಿಯು ಶಾಸಕಿ ಬಿಮಾ ಬಾರ್ತಿ ಅವರು ರಾಜೀನಾಮೆ ನೀಡಿ ಆರ್ ಜೆಡಿ ಪಕ್ಷ ಸೇರಿ ಪೂರ್ನಿಯಾದಿಂದ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.