24 ವರ್ಷ ಬಳಿಕ ವೇದಿಕೆ ಹಂಚಿಕೊಂಡರು

ಮೈನ್‌ಪುರಿಯಲ್ಲಿ ನಡೆದ ಎಸ್ಪಿ-ಬಿಎಸ್ಪಿ ಬೃಹತ್‌ ರ್ಯಾಲಿಯಲ್ಲಿ ಮಾಯಾ-ಮುಲಾಯಂ ಭಾಗಿ

Team Udayavani, Apr 20, 2019, 6:00 AM IST

15

ಹೊಸದಿಲ್ಲಿ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಮತ್ತು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಬರೋಬ್ಬರಿ 24 ವರ್ಷಗಳ ಹಗೆತನ ಮರೆತು ಶುಕ್ರವಾರ ಒಂದೇ ವೇದಿಕೆ ಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹಾವು-ಮುಂಗುಸಿ ಯಂತೆ ಕಚ್ಚಾ ಡಿಕೊಂಡಿದ್ದ ಉಭಯ ನಾಯಕರು ಪರಸ್ಪರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ ಕಾರ್ಯ ಕರ್ತರನ್ನು ಅಚ್ಚರಿಗೆ ನೂಕಿದ್ದಾರೆ.

ಉತ್ತರಪ್ರದೇಶದ ಮೈನ್‌ಪುರಿಯಲ್ಲಿ (ಮುಲಾಯಂ ಸ್ಪರ್ಧಿಸುತ್ತಿರುವ ಕ್ಷೇತ್ರ) ಶುಕ್ರವಾರ ಎಸ್ಪಿ-ಬಿಎಸ್ಪಿ ಮೈತ್ರಿ ಕೂಟದ ರ್ಯಾಲಿ ನಡೆದಿದ್ದು, ಇಲ್ಲಿ ಮಾಯಾ ಹಾಗೂ ಮುಲಾಯಂ ವೇದಿಕೆ ಹಂಚಿ ಕೊಂಡಿ ದ್ದಾರೆ. ಕಾರ್ಯಕ್ರ ಮದಲ್ಲಿ ಮಾತನಾಡಿದ ಮುಲಾಯಂ, ನಾನು ಮತ್ತು ಮಾಯಾವತಿ ದೀರ್ಘ‌ ಕಾಲದ ಬಳಿಕ ವೇದಿಕೆ ಹಂಚಿಕೊಂಡಿದ್ದೇವೆ. ಎಲ್ಲ ಕಾರ್ಯಕರ್ತರೂ ಮಾಯಾ ವತಿ ಅವರನ್ನು ಗೌರವದಿಂದ ಕಾಣಬೇಕು ಎಂದು ಕರೆ ನೀಡುವ ಮೂಲಕ 1995ರ ಘಟನೆ ಮರಕಳಿಸಬಾರದು ಎಂಬಂಥ ಸೂಚನೆ ಯನ್ನು ಪರೋಕ್ಷವಾಗಿ ನೀಡಿದ್ದಾರೆ.

ಎಸ್ಪಿ-ಬಿಎಸ್ಪಿ 2 ವರ್ಷಗಳ ಕಾಲ ಮೈತ್ರಿ ಸರಕಾರ ನಡೆಸಿತ್ತಾದರೂ, 1995 ರಲ್ಲಿ ಲಕ್ನೋದ ವಿವಿಐಪಿ ಅತಿಥಿಗೃಹದಲ್ಲಿ ಮಾಯಾವತಿ ಅವರ ಮೇಲೆ ಎಸ್ಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಅಂದಿನಿಂದ ಇಂದಿನವರೆಗೆ ಮಾಯಾ ಹಾಗೂ ಮುಲಾಯಂ ನಡುವಿನ ದ್ವೇಷ ಎಷ್ಟು ಪ್ರಖರವಾಗಿತ್ತೆಂದರೆ, ಇವರಿ ಬ್ಬರೂ ಎಂದೂ ಮುಖ-ಮುಖ ನೋಡಿರಲಿಲ್ಲ. ಈಗ ಹಳೆಯದೆಲ್ಲವನ್ನೂ ಮರೆತು ಇಬ್ಬರೂ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಒಂದಾಗಿದ್ದಾರೆ. ರ್ಯಾಲಿಯಲ್ಲಿ ಮಾತನಾಡಿದ ಮಾಯಾ ವತಿ, “ಮುಲಾಯಂ ಸಿಂಗ್‌ಜೀ ಸಮಾ ಜದ ಎಲ್ಲ ವರ್ಗಗಳನ್ನೂ ವಿಶೇಷವಾಗಿ ಹಿಂದುಳಿದ ವರ್ಗಗಳನ್ನು ತಮ್ಮೊಂದಿಗೆ ಕರೆದೊಯ್ದವರು. ಅವ ರೊಬ್ಬ ಹಿಂದು ಳಿದ ವರ್ಗಗಳ ನೈಜ ನಾಯಕ. ಅವರು ಪ್ರಧಾನಿ ಮೋದಿಯ ವರಂತೆ ನಕಲಿ ನಾಯಕನಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ, ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಸರಕಾರ ಯಂತ್ರವನ್ನು ದುರ್ಬಳಕೆ ಮಾಡಿ ಕೊಂಡು, ತಮ್ಮ ಮೇಲ್ವರ್ಗದ ಜಾತಿ ಯನ್ನು ಹಿಂದುಳಿದ ವರ್ಗವೆಂದು ಬದ ಲಾಯಿಸಿಕೊಂಡರು ಎಂದೂ ಆರೋ  ಪಿಸಿ ದ್ದಾರೆ. ಗೆಸ್ಟ್‌ಹೌಸ್‌ ಪ್ರಕರಣ ವನ್ನೂ ಪ್ರಸ್ತಾಪಿಸಿದ ಮಾಯಾವತಿ, “1995ರ ಅತಿಥಿ ಗೃಹ ಪ್ರಕರಣದ ಬಳಿಕವೂ ಇಂದು ಮುಲಾಯಂ ಅವರಿಗಾಗಿ ಮತ ಕೇಳಲು ನಾನು ಯಾಕೆ ಬಂದೆ ಎಂದು ಕೆಲವರು ಯೋಚಿ ಸುತ್ತಿರ ಬಹುದು. ಆದರೆ, ದೇಶದ, ಸಾರ್ವಜ ನಿಕರ ಹಿತಾಸಕ್ತಿ ಯಿಂದ ಕೆಲವೊಮ್ಮೆ ಕಠಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ’ ಎಂದಿದ್ದಾರೆ.

ಬಿಜೆಪಿ ಲೇವಡಿ
ಎಸ್ಪಿ-ಬಿಎಸ್ಪಿ ರ್ಯಾಲಿ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ, “ಪ್ರಧಾನಿ ಮೋದಿ ಅವರ ಪರ ಇರುವಂಥ ಬಿರುಗಾಳಿಗೆ ಹೆದರಿ ಈ ಇಬ್ಬರು ನಾಯಕರು ಒಂದಾಗಿದ್ದಾರೆ. ಆದರೆ, ದೇಶದ ಹಾಗೂ ಉತ್ತರ ಪ್ರದೇಶದ ಜನ ಮೋದಿಯವರ ಜತೆಗಿದ್ದಾರೆ’ ಎಂದು ಹೇಳಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.