ಮಹಾತ್ಮರ ಜಯಂತಿ, ಪುಣ್ಯತಿಥಿಗಳಿಗಿಲ್ಲ ರಜೆ
Team Udayavani, Apr 15, 2017, 3:50 AM IST
ಲಕ್ನೋ: ಆಡಳಿತದಲ್ಲಿ ದಿನಕ್ಕೊಂದು ಜಲಕ್ ಮೂಡಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ಮಹಾತ್ಮ ರ ಜನ್ಮದಿನ ಮತ್ತು ಪುಣ್ಯತಿಥಿಯ ಅಂಗವಾಗಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ರಜೆಗೆ ಕತ್ತರಿ ಹಾಕಿದ್ದಾರೆ.
ಇನ್ನು ಮುಂದೆ ಇಂತಹ ದಿನಗಳಂದು ಶಾಲೆಗಳು ನಡೆಯಲಿದ್ದು, ಆ ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು. ಇದಕ್ಕಾಗಿ ಸರ್ಕಾರವು ಕಾಯಿದೆಗೆ ತಿದ್ದುªಪಡಿ ತರಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಡಾ.ಬಿ. ಆರ್. ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಗಣ್ಯರ ಜಯಂತಿ, ಪುಣ್ಯತಿಥಿಗೆ ರಜೆ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಏಕೆಂದರೆ, ಆ ದಿನ ಶಾಲೆಗೆ ಏಕೆ ರಜೆ ಇರುತ್ತದೆ ಎಂದು ಮಕ್ಕಳಿಗೇ ಗೊತ್ತಿರುವುದಿಲ್ಲ. ರಜೆ ಕಳೆದುಬಿಟ್ಟರೆ ವರ್ಷದಲ್ಲಿ ಶಾಲೆ ನಡೆಯುವುದು ಕೇವಲ 120 ದಿನಗಳು ಮಾತ್ರ. ಇದು ಹೀಗೇ ಮುಂದುವರಿದರೆ, ಮುಂದೊಂದು ದಿನ ಶಾಲೆಗಳು ನಡೆಯುವ ದಿನಗಳೇ ಇಲ್ಲವಾಗಬಹುದು. ಹಾಗಾಗಿ, ಈ ರಜೆಗಳನ್ನು ರದ್ದು ಮಾಡಿ, ಅಂಥ ದಿನಗಳಂದು 2-3 ಗಂಟೆಗಳ ಕಾಲ ಆ ಗಣ್ಯ ವ್ಯಕ್ತಿಗೆ ಸಂಬಂಧಿಸಿದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಬೇಕು,’ ಎಂದು ಖಡಕ್ಕಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.