50 ದಿನಗಳ ಸಾಧನೆಯೇ ಮುಂದಿನ ದಿಕ್ಸೂಚಿ

ಮೋದಿ ಸರಕಾರದ ಸಾಧನೆಗೆ ಜೆ.ಪಿ. ನಡ್ಡಾ ಮೆಚ್ಚುಗೆ

Team Udayavani, Jul 27, 2019, 6:10 AM IST

v-46

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 2ನೇ ಅವಧಿಯ 50 ದಿನಗಳಲ್ಲಿ ಜಾರಿ ಮಾಡಲಾಗಿರುವ ಅಭಿವೃದ್ಧಿ ಕಾಮಗಾರಿಗಳು 50 ವರ್ಷಗಳ ಸಾಧನೆಗೆ ಸಮ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಮಾತ ನಾಡಿದ ಅವರು, ಅಧಿಕಾರದ 100 ದಿನಗಳು ಪೂರ್ತಿ ಯಾದ ಬಳಿಕ ಸುದ್ದಿಗೋಷ್ಠಿ ನಡೆಸುವುದು ಸಾಮಾನ್ಯ. ಆದರೆ ನಾವು 50 ದಿನಗಳಲ್ಲೇ ಅದನ್ನು ಆರಂಭಿಸಿದ್ದೇವೆ ಎಂದಿದ್ದಾರೆ. 2024ರ ಒಳಗಾಗಿ ದೇಶದ ಪ್ರತಿ ಮನೆಗೆ ಟ್ಯಾಪ್‌ ಮೂಲಕ ಕುಡಿಯುವ ನೀರು ಸಹಿತ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದಿದ್ದಾರೆ.

ಉತ್ತಮ ಸಂಕೇತ
ಎರಡನೇ ಅವಧಿಯ ಮೊದಲ ಐವತ್ತು ದಿನ ಗಳಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳು ದೇಶದ ಮುಂದಿನ ದಿನಗಳಿಗೆ ಉತ್ತಮ ಸಂಕೇತ ನೀಡು ವಂಥದ್ದಾಗಿವೆ. ಅವುಗಳು ದೇಶದ ಅಭಿ ವೃದ್ಧಿಯ ಮೈಲುಗಲ್ಲುಗಳು ಎಂದು ಅವರು ವ್ಯಾಖ್ಯಾ ನಿಸಿದ್ದಾರೆ. ಅಲ್ಲದೆ ಅದಕ್ಕಾಗಿ ರಾಜಕೀಯ ನಿಲುವು ಮತ್ತು ಇಚ್ಛಾಶಕ್ತಿ ಅಗತ್ಯ ಎಂದಿದ್ದಾರೆ ಬಿಜೆಪಿ ಕಾರ್ಯಾಧ್ಯಕ್ಷ.

1.92 ಕೋಟಿ ಮನೆಗಳು
ಎರಡನೇ ಅವಧಿಯಲ್ಲಿ ಮೋದಿ ನೇತೃತ್ವದ ಸರಕಾರ ದೇಶದಲ್ಲಿ 1.92 ಕೋಟಿ ಮನೆಗಳ ನಿರ್ಮಾಣಕ್ಕೆ ಉದ್ದೇಶಿಸಿದೆ ಎಂದಿದ್ದಾರೆ ನಡ್ಡಾ. ಅವುಗಳಿಗೆ ಶುದ್ಧ ಕುಡಿಯುವ ನೀರು, ಅಡುಗೆ ಅನಿಲ, ಶೌಚಾಲಯ ಒಳಗೊಳ್ಳಲಿದೆ. ಅದಕ್ಕಾಗಿ ಕೇಂದ್ರ ಸರಕಾರ ಹೊಸ ಯೋಜನೆ ಹಾಕಿದೆ ಎಂದಿದ್ದಾರೆ.

ಜಲದಿಂದ ಚಂದ್ರನವರೆಗೆ
ಮೋದಿ ನೇತೃತ್ವದ ಸರಕಾರ ಜಲದಿಂದ ಚಂದ್ರನ ವರೆಗಿನ ಹಲವು ಯೋಜನೆಗಳನ್ನು 50 ದಿನ ಗಳ ಅವಧಿ ಯಲ್ಲಿ ಜಾರಿ ಮಾಡಿದೆ. ಗ್ರಾಮೀಣರು, ಬಡವರು, ಕಾರ್ಮಿಕರು, ಸಣ್ಣ ಅಂಗಡಿ ಇಟ್ಟು ಕೊಂಡವರು, ವಂಚಿತ ರೆಲ್ಲರಿಗೂ ಅನುಕೂಲ ವಾಗುವಂಥ ನಿರ್ಧಾರ ಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಅತ್ಯುತ್ತಮ ಕಲಾಪ
ಸದ್ಯ ನಡೆಯುತ್ತಿರುವ ಲೋಕಸಭಾ ಅಧಿವೇಶನ ಅತ್ಯಂತ ಫ‌ಲಪ್ರದವೆಂದು ಬಣ್ಣಿಸಿದ ನಡ್ಡಾ ಅವರು, ಹೆಚ್ಚಿನ ವಿಧೇಯಕಗಳು ಈ ಬಾರಿಯ ಅಧಿವೇಶನದಲ್ಲಿ ಅಂಗೀಕಾರವಾಗಿವೆ ಎಂದಿದ್ದಾರೆ.

100 ಲಕ್ಷ ಕೋಟಿ ಹೂಡಿಕೆ
2024-25ನೇ ವಿತ್ತೀಯ ವರ್ಷದ ವೇಳೆಗೆ ದೇಶದ ಅರ್ಥ ವ್ಯವಸ್ಥೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ಏರಿಸುವ ನಿಟ್ಟಿನಲ್ಲಿ ಮೂಲ ಸೌಕರ್ಯ ಕ್ಷೇತ್ರದಲ್ಲಿ 100 ಲಕ್ಷ ಕೋಟಿ ರೂ. ಹೂಡಿಕೆ ಮಾಡಿದೆ. ಇದರಿಂದಾಗಿ ಉದ್ಯೋಗ ಸೃಷ್ಟಿಗೆ ಕೂಡ ಅನುಕೂಲವಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.