ವಿಪಕ್ಷಗಳ ಮೈತ್ರಿಗೆ UPA ಬದಲು INDIA ಎಂದು ಹೆಸರಿಟ್ಟಿದ್ದು ಯಾಕೆಂದರೆ…; ಮೋದಿ ವಾಗ್ದಾಳಿ
Team Udayavani, Jul 27, 2023, 4:07 PM IST
ಸಿಕಾರ್ (ರಾಜಸ್ಥಾನ): ವಿಪಕ್ಷಗಳ ಬಗ್ಗೆ ತಮ್ಮ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅವರು ಯುಪಿಎ ಯಿಂದ ಇಂಡಿಯಾ (INDIA) ಗೆ ಬದಲಾಗಿದ್ದು ಅವರು ಮಾಡಿರುವ ತಪ್ಪುಗಳನ್ನು ಮುಚ್ಚಿಹಾಕಲು ಎಂದಿದ್ದಾರೆ.
ಅವರು ತಮ್ಮ ಮೈತ್ರಿಯ ಹೆಸರನ್ನು ಯುಪಿಎ ಬದಲಾಗಿ ಇಂಡಿಯಾ ಎಂದು ಮಾಡಿಕೊಂಡಿದ್ದಾರೆ. ಬಡವರ ವಿರುದ್ಧ ತಾವು ರೂಪಿಸಿದ ಸಂಚನ್ನು ಮರೆ ಮಾಚಲು ಅವರು ಈ ರೀತಿ ಮಾಡಿಕೊಂಡಿದ್ದಾರೆ ಎಂದು ರಾಜಸ್ಥಾನದ ಸಿಕಾರ್ ನಲ್ಲಿ ಪ್ರಧಾನಿ ಮೋದಿ ಹೇಳಿದರು.
ಮೋಸ ಮಾಡುವ ಕಂಪನಿಗಳು ಮಾಡುವಂತೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಹೆಸರು ಬದಲಾವಣೆ ಮಾಡಿಕೊಂಡಿದೆ. ಭಯೋತ್ಪಾದನೆಯ ಮುಂದೆ ಶರಣಾದ ತಮ್ಮ ಕಳಂಕವನ್ನು ಮರೆಮಾಚಲು ಅವರು ಈ ರೀತಿ ಮಾಡಿಕೊಂಡಿದ್ದಾರೆ. ಅವರದ್ದು ದೇಶ ವಿರೋಧಿಗಳು ಅನುಸಿರಸುವ ಮಾರ್ಗ. ಅವರು ಇಂಡಿಯಾ ಎಂದು ಹೆಸರಿಟ್ಟುಕೊಂಡು ದೇಶಪ್ರೇಮ ಮೆರೆಯುತ್ತಿದ್ದಾರೆ, ಆದರೆ ಅವರ ಉದ್ದೇಶ ದೇಶವನ್ನು ಕೊಳ್ಳೆ ಹೊಡೆಯುವುದಾಗಿದೆ ಎಂದರು.
ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಟೀಕೆ ಮಾಡಿರುವ ಪ್ರಧಾನಿ ಮೋದಿ, ಉಚ್ಛಾಟಿತ ಸಚಿವ ರಾಜೇಂದ್ರ ಗುಧಾ ಅವರ ಕೆಂಪು ಡೈರಿ ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲಿದೆ ಎಂದರು.
ಇದನ್ನೂ ಓದಿ:ಸತ್ಯಾಂಶ ಹೊರಬರುವವರೆಗೆ ತಾಳ್ಮೆ ಇರಲಿ: ಉಡುಪಿ ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ ಹೇಳಿಕೆ
ಕೆಲ ದಿನಗಳ ಹಿಂದೆ ರಾಜಸ್ಥಾನ ವಿಧಾನಸಭೆಯಲ್ಲಿ ನಡೆದ ಪ್ರಹಸನದಲ್ಲಿ ಆಗ ಸಚಿವರಾಗಿದ್ದ ರಾಜೇಂದ್ರ ಗುಧಾ ಅವರು ಕೆಂಪು ಡೈರಿಯನ್ನು ಪ್ರದರ್ಶಿಸಿದ್ದರು. ಆ ಡೈರಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅಸಮರ್ಪಕ ಹಣಕಾಸು ವಹಿವಾಟು ನಡೆಸಿದ ಮಾಹಿತಿ ಎಂದಿದ್ದರು. ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಲಾಗಿತ್ತು.
“ಈ ಕೆಂಪು ಡೈರಿ ಕಾಂಗ್ರೆಸ್ ನ ‘ಸುಳ್ಳಿನ ಅಂಗಡಿ’ಯ ಹೊಸ ಸಾಕ್ಷಿಯಾಗಿದೆ. ಕಾಂಗ್ರೆಸ್ ನ ಕೆಟ್ಟ ಕಾರ್ಯಗಳು ಈ ಡೈರಿಯಲ್ಲಿದೆ ಎಂದು ಹೇಳಲಾಗಿದೆ. ಇದೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗಲಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ
Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ
ಮಗಳು ಸೆ*ಕ್ಸ್ ರ್ಯಾಕೆಟ್ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ; ಆತಂಕದಿಂದ ಅಸುನೀಗಿದ ತಾಯಿ!
GST;ನವೆಂಬರ್ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?
Google ಜತೆ ಬೆಂಗಳೂರಿನ ಕ್ಲೀನ್ಮ್ಯಾಕ್ಸ್ ಸಹಯೋಗ: ಪವನ ವಿದ್ಯುತ್ ಉತ್ಪಾದನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್
UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.