Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ
Team Udayavani, Sep 14, 2024, 7:00 PM IST
ಹೊಸದಿಲ್ಲಿ: ”ಹಿಂದಿ ಮತ್ತು ಇತರ ಭಾರತೀಯ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು ಏಕೆಂದರೆ ಅಧಿಕೃತ ಭಾಷೆ ಹಿಂದಿ ಎಲ್ಲ ಭಾಷೆಗಳ ಸ್ನೇಹಿತ ಮತ್ತು ಅವು ಪರಸ್ಪರ ಪೂರಕವಾಗಿವೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ(ಸೆ14) ಹೇಳಿದ್ದಾರೆ.
ಹಿಂದಿ ದಿವಸ್ ಸಂದರ್ಭ ನಾಲ್ಕನೇ ಅಖಿಲ ಭಾರತೀಯ ರಾಜಭಾಷಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಶಾ, ‘ಎಲ್ಲ ಇತರ ಭಾರತೀಯ ಭಾಷೆಗಳನ್ನು ಬಲಪಡಿಸುವವರೆಗೆ ಮತ್ತು ಅಧಿಕೃತ ಭಾಷೆಯು ಎಲ್ಲರೊಂದಿಗೆ ಸಂವಾದವನ್ನು ಸ್ಥಾಪಿಸುವವರೆಗೆ ಅಧಿಕೃತ ಭಾಷೆ ಹಿಂದಿಯ ಪ್ರಚಾರ ನಡೆಯುವುದಿಲ್ಲ’ ಎಂದು ಹೇಳಿದರು.
”ಹಿಂದಿಯನ್ನು ಸಂವಹನ ಭಾಷೆ, ಸಾಮಾನ್ಯ ಭಾಷೆ, ತಾಂತ್ರಿಕ ಭಾಷೆ ಮತ್ತು ಈಗ ಅಂತಾರಾಷ್ಟ್ರೀಯ ಭಾಷೆಯನ್ನಾಗಿ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವ ಸಂದರ್ಭವೇ ಹಿಂದಿ ದಿವಸ್” ಎಂದು ಶಾ ಹೇಳಿದರು.
“ನಾವು ಹಿಂದಿಯನ್ನು ಅಧಿಕೃತ ಭಾಷೆಯಾಗಿ 75 ವರ್ಷಗಳನ್ನು ಪೂರ್ಣಗೊಳಿಸಿದ ಗುರುತಾಗಿ ವಜ್ರಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಸ್ವೀಕರಿಸಿ ದೇಶದ ಎಲ್ಲ ಸ್ಥಳೀಯ ಭಾಷೆಗಳನ್ನು ಹಿಂದಿಯ ಮೂಲಕ ಸಂಪರ್ಕಿಸುವ ಮೂಲಕ ನಮ್ಮ ಸಂಸ್ಕೃತಿ, ಭಾಷೆ, ಸಾಹಿತ್ಯ, ಕಲೆ, ವ್ಯಾಕರಣವನ್ನು ಉಳಿಸಿ ಬೆಳೆಸುವತ್ತ ಸಾಗುತ್ತಿದ್ದೇವೆ. ಹಿಂದಿಯು ಭೌಗೋಳಿಕ-ರಾಜಕೀಯ ಭಾಷೆಗಿಂತ ಹೆಚ್ಚಾಗಿ ಭೌಗೋಳಿಕ-ಸಾಂಸ್ಕೃತಿಕ ಭಾಷೆಯಾಗಿದೆ. ಗೃಹ ಮತ್ತು ಸಹಕಾರ ಎಂಬ ತನ್ನ ಎರಡು ಸಚಿವಾಲಯಗಳ ಫೈಲ್ಗಳ ಮೂಲಕ ಎಲ್ಲಾ ಸಂವಹನಗಳನ್ನು ಹಿಂದಿ ಮೂಲಕ ಮಾಡಲಾಗುತ್ತದೆ. ಈ ಹಂತವನ್ನು ತಲುಪಲು ಮೂರು ವರ್ಷಗಳು ತೆಗೆದುಕೊಂಡಿತು” ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.