![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 12, 2020, 9:15 PM IST
ಪುಣೆ : ರಾಜ್ಯದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಹಾಗೂ ವಿಧಾನಸಭಾ ಚುನಾವಣೆಯ ಮೊದಲು ಶರದ್ ಪವಾರ್ ಹಾಗೂ ರಾಜ್ ಠಾಕ್ರೆ ಅವರು ಹತ್ತಿರವಾಗಿದ್ದು, ಎಲ್ಲರು ಕಂಡಿದ್ದಾರೆ. ಆದರೆ ಮಹಾವಿಕಾಸ್ ಆಘಾಡಿಯ ಸರಕಾರ ರಾಜ್ಯದಲ್ಲಿ ರಚನೆಯಾದ ನಂತರ ಇಬ್ಬರು ನಾಯಕರು ಮತ್ತೆ ಪರಸ್ಪರ ವಿರುದ್ಧವಾಗಿರುವುದು ಕಾಣಿಸಿದೆ. ಪುಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್ ಅವರು, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರ ಬಗ್ಗೆ ಮೋರ್ಚಾದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ರಾಜ್ ಠಾಕ್ರೆ ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ರಾಜಕೀಯದ ಮೇಲೆ ಈ ರೀತಿಯ ಹೇಳಿಕೆ ಯಾವುದೆ ಪ್ರಭಾವ ಬೀರುವುದಿಲ್ಲ ಎಂದರು.
ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರು ಮೋರ್ಚಾದ ಭಾಷಣದಲ್ಲಿ ನುಸುಳುಕೋರರ ವಿರುದ್ಧ ಮಾತನಾಡುತ್ತಾ ಕಲ್ಲು ಹೊಡೆಯುವವರಿಗೆ ಕಲ್ಲುಗಳಿಂದ ಮತ್ತು ಕತ್ತಿಗೆ ಕತ್ತಿಯಿಂದ ಉತ್ತರಿಸಲಾಗುವುದು ಎಂದು ಹೇಳಿದ್ದರು. ಅವರ ಹೇಳಿಕೆ ಬಗ್ಗೆ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಲ್ಲಿ ಕೇಳಿದಾಗ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ರಾಜ್ಯದ ರಾಜಕೀಯದ ಮೇಲೆ ಈ ರೀತಿಯ ಹೇಳಿಕೆ ಯಾವುದೆ ಪ್ರಭಾವ ಬೀರುವುದಿಲ್ಲ.
ಕೆಲವರ ಭಾಷಣಗಳನ್ನು ಕೇಳಲು ಜನರು ಬರುತ್ತಾರೆ, ಯಾಕೆಂದರೆ ಅವರ ಭಾಷಣದಿಂದ ಮನೋರಂಜನೆಯಾಗುತ್ತದೆ ಹೊರತು, ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಸೋಲಿನ ಸರಣೆ ನಿಲ್ಲುವಂತೆ ಕಾಣುತ್ತಿಲ್ಲ
ಈ ವೇಳೆ ದಿಲ್ಲಿಯಲ್ಲಿಯ ಫಲಿತಾಂಶದ ಬಗ್ಗೆ ಮಾತನಾಡಿದ ಶರದ್ ಪವಾರ್ ಅವರು, ಬಿಜೆಪಿ ಸೋಲಿನ ಸರಣಿ ಪ್ರಾರಂಭವಾಗಿದೆ, ಅದು ನಿಲ್ಲುವಂತೆ ಕಾಣುತ್ತಿಲ್ಲ. ಬಿಜೆಪಿ ಪ್ರಯತ್ನ ವಿಫಲವಾಗಿದೆ. ಬಿಜೆಪಿಗೆ ಪೈಪೋಟಿ ನೀಡಿದ ಪಕ್ಷವನ್ನು ಸಾರ್ವಜನಿಕರು ಆಯ್ಕೆ ಮಾಡಿದ್ದಾರೆ. ಕೇಜ್ರಿವಾಲ್ ಗೆಲ್ಲುತ್ತಾರೆ ಎಂದು ಹೇಳಲಾಗಿತ್ತು. ಆದ್ದರಿಂದ, ಫಲಿತಾಂಶದಿಂದ ನಾನು ವೈಯಕ್ತಿಕವಾಗಿ ಆಶ್ಚರ್ಯಪಡುತ್ತಿಲ್ಲ, ಎಂದು ಹೇಳುತ್ತಾ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಅಭಿನಂದಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.