ಅಯೋಧ್ಯೆ:ದೀಪಾವಳಿಗೆ ಸಿಎಂ ಯೋಗಿಯಿಂದ ಸಿಹಿ ಸುದ್ದಿ ? UP BJP ಅಧ್ಯಕ್ಷ
Team Udayavani, Nov 2, 2018, 6:09 PM IST
ಲಕ್ನೋ : ಅಯೋಧ್ಯೆಗೆ ಸಂಬಂಧಿಸಿದಂತೆ ಈ ದೀಪಾವಳಿಗೆ ನೀವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕೆಲವು ಮಹತ್ವದ ಪ್ರಕಟನೆಗಳನ್ನು ಕೇಳಬಹುದಾಗಿದೆ ಎಂದು ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಮಹೇಂದ್ರ ನಾಥ್ ಪಾಂಡೆ ಇಂದು ಹೇಳಿದ್ದಾರೆ.
ಆದರೆ ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಪಾಂಡೆ, ”ಅದನ್ನು ಮಹಾನ್ ಸಂತ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಪ್ರಕಟಿಸುವುದು ಸೂಕ್ತ” ಎಂದು ಹೇಳಿದರು.
“ದೀಪಾವಳಿ ಬರಲಿ; ಅಯೋಧ್ಯೆಯ ಬಗ್ಗೆ ನಿಮಗೆಲ್ಲ ಖುಷಿ ಸುದ್ದಿ ಸಿಗಲಿದೆ’ ಎಂದು ಪಾಂಡೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಸುಪ್ರೀಂ ಕೋರ್ಟ್ ಅಯೋಧ್ಯೆಯ ರಾಮ ಜನ್ಮಭೂಮಿ ಒಡೆತನದ ವಿವಾದದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ ಎರಡೇ ದಿನಗಳ ತರುವಾಯ ಪಾಂಡೆ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ. ಸುಪ್ರೀಂ ಕೋರ್ಟಿನಿಂದ ವಿಚಾರಣೆ ಮುಂದೂಡಿಕೆಗೆ ಆರ್ಎಸ್ಎಸ್ ಮತ್ತು ವಿಎಚ್ಪಿಯಿಂದ ಕಟುವಾದ ಟೀಕೆ ವ್ಯಕ್ತವಾಗಿತ್ತು.
ಸುಪ್ರೀಂ ಕೋರ್ಟ್ ನಿರ್ಧಾರ ಪ್ರಕಟವಾದ ಒಂದು ದಿನದ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ಶಾಂತಿ ಮತ್ತು ಸಹೋದರತೆಗಾಗಿ ಅಯೋಧ್ಯೆ ವಿವಾದವನ್ನು ಕ್ಲಪ್ತವಾಗಿ ಇತ್ಯರ್ಥಪಡಿಸುವ ಅಗತ್ಯವಿದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.