ಇದು ವಿಫ‌ಲ ಸರಕಾರ ಲೋಕಸಭೆಯಲ್ಲಿ ಕಾಂಗ್ರೆಸ್‌ ಆರೋಪ


Team Udayavani, Feb 7, 2018, 10:55 AM IST

kharge.jpg

ಹೊಸದಿಲ್ಲಿ: ಕೇಂದ್ರ ಸರಕಾರ ಭರವಸೆಗಳನ್ನು ಈಡೇರಿಸುವಲ್ಲಿ ವಿಫ‌ಲವಾಗಿದೆ ಎಂದು ವಿಪಕ್ಷಗಳು ಲೋಕಸಭೆಯಲ್ಲಿ ಆರೋಪಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲೆ ಧನ್ಯವಾದ ಸಮರ್ಪಿಸುವ ಗೊತ್ತುವಳಿ ಮೇಲೆ ಮಾತ ನಾಡಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸರಕಾರದ ನೀತಿ ಗಳಿಂದ ಜನರಿಗೆ ತೊಂದರೆಯಾಗುತ್ತಿವೆ ಎಂದರು.  ಕಾಂಗ್ರೆಸ್‌ ನೇತೃತ್ವದ ಹಿಂದಿನ ಸರಕಾರಗಳು 70 ವರ್ಷಗಳಲ್ಲಿ ಜಾರಿಗೆ ತಂದಿರುವ ಉತ್ತಮ ಕೆಲಸಗಳನ್ನು ಕಡೆಗಣಿಸುವ ಕೆಲಸವನ್ನು ಹಾಲಿ ಸರಕಾರ ಮಾಡುತ್ತಿದೆ. ಕಾಂಗ್ರೆಸ್‌ ದೇಶಕ್ಕೇನು ಮಾಡಿದೆ ಎಂಬುದನ್ನು ಹಿಂದಿನ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರಕಾರ ತಿಳಿದುಕೊಳ್ಳಲೇ ಇಲ್ಲ ಎಂದು ಅವರು ಹೇಳಿದ್ದಾರೆ. 

ಪಾಕ್‌ ಕುರಿತ ಸರಕಾರದ ನೀತಿ ವಿಫ‌ಲವಾ ಗಿದೆ. ಇದರಿಂದಾಗಿ ಆ ದೇಶ ನಮ್ಮವರನ್ನು ಕೊಲ್ಲುತ್ತಿದೆ ಎಂದು ಟೀಕಿಸಿದರು. ಹೀಗಾಗಿ 56 ಇಂಚಿನ ಎದೆ ಎಲ್ಲಿದೆ ಎಂದು ಮೋದಿಯ ವರನ್ನು ಉದ್ದೇಶಿಸಿ ಪ್ರಶ್ನಿಸಿದರು ಖರ್ಗೆ.

ರಫೇಲ್‌ ಅವ್ಯವಹಾರ: ರಫೇಲ್‌ ಯುದ್ಧ ವಿಮಾನಗಳ ಖರೀದಿ ಬಗ್ಗೆ ಮಾಹಿತಿ ಬಹಿರಂಗ ಗೊಳಿಸುವುದಿಲ್ಲ ಎಂದು ಸರಕಾರ ಹೇಳು ತ್ತಿದ್ದು, ಅದರಲ್ಲಿ ಅವ್ಯವಹಾರ ಉಂಟಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಪ್ಯಾರಿಸ್‌ಗೆ ತೆರಳಿ, ಡೀಲ್‌ನಲ್ಲಿ ಬದಲು ಮಾಡಿದ್ದಾರೆ. ಭಾರತಕ್ಕೆ ಈ ಮಾಹಿತಿ ಗೊತ್ತಿದೆ ಎಂದಿದ್ದಾರೆ. 

21.54 ಕೋಟಿ ನಕಲಿ ನೋಟು:  ಈವರೆಗೆ 21.54 ಕೋಟಿ ನಕಲಿ ನೋಟುಗಳನ್ನು ವಶಪ ಡಿಸಿಕೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ. 

ಇಂದು ಪ್ರಧಾನಿ ಉತ್ತರ: ಪ್ರಧಾನಿ ಮೋದಿ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ನೀಡುವ ಗೊತ್ತುವಳಿಗೆ ಬುಧವಾರ ಉತ್ತರ ನೀಡಲಿದ್ದು, ಎಲ್ಲ ಸಂಸದರು ಹಾಜರಿ ರಬೇಕು ಎಂದು ಬಿಜೆಪಿ ವಿಪ್‌ ನೀಡಿದೆ.

ವಿಪಕ್ಷಗಳ ಆಕ್ರೋಶ: ರಾಜ್ಯಸಭೆ ಕಲಾಪ ಮುಂದೂಡುವುದಕ್ಕೆ ವಿಪಕ್ಷಗಳು ಆಕ್ಷೇಪಿ ಸಿವೆ. ಬೆಳಗ್ಗೆ 11 ಗಂಟೆಗೆ ಸಮಾವೇಶಗೊಂಡಿದ್ದ ಸದನವನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂ ಡಲಾಗಿತ್ತು. ಸಭಾಪತಿ ವೆಂಕಯ್ಯ ನಾಯ್ಡು ಕ್ರಮದಿಂದ ವಿಚಲಿತರಾದ ಪ್ರತಿಪಕ್ಷ ನಾಯಕ ಗುಲಾಂ ನಬಿ, ಸರ್ಕಾರ ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದೆ. ಪ್ರತಿಪಕ್ಷಗಳ ಧ್ವನಿ ಅಡಗಿಸಲು ಮುಂದಾಗುತ್ತಿದೆ. 1950ರ ಬಳಿಕ ಈ ರೀತಿಯಾಗಿಲ್ಲ ಎಂದರು.

ಅವಕ್ಕಾದ ಖರ್ಗೆ
ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವಕ್ಕಾದ ಘಟನೆ ನಡೆದಿದೆ. ಬಜೆಟ್‌ನಲ್ಲಿ ಆಂಧ್ರಕ್ಕೆ ನೆೆರವು ಪ್ರಕಟಿಸಿಲ್ಲ ವೆಂದು ಟಿಡಿಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಖರ್ಗೆ ಮಾತನಾಡುತ್ತಿದ್ದರು. ಟಿಡಿಪಿ ಸಂಸದರೊಬ್ಬರು ಅವರ ಮುಂದೆಯೇ ನಿಂತು ಘೋಷಣೆ ಕೂಗಲಾರಂಭಿಸಿ ದರು. ಸ್ಪೀಕರ್‌ ಅವರನ್ನು ನೋಡಲು ಅಸಾಧ್ಯವಾದ್ದರಿಂದ ಸಂಸದರ ಹೆಗಲು ತಟ್ಟಿ ಕೊಂಚ ಸರಿದು ನಿಲ್ಲುವಂತೆ ಸೂಚಿಸಿ ದರು. ಇದರಿಂದ ಸಿಟ್ಟಿಗೆದ್ದ ಆ ಸಂಸದ “ನೀವೇಕೆ ನನಗೆ ಹೊಡೆಯುತ್ತೀರಿ? ಇದು ಒಳ್ಳೆಯದಲ್ಲ’ ಎನ್ನತೊಡಗಿದರು. ಇದರಿಂದ ಅವಕ್ಕಾದ ಖರ್ಗೆಯವರಿಗೆ ಕೆಲ ಕಾಲ ಮಾತುಗಳೇ ಹೊರಡಲಿಲ್ಲ. ಅನಂತರ ಮತ್ತೂಬ್ಬ ಟಿಡಿಪಿ ಸಂಸದ ಬಂದು ಸಮಾಧಾನಪಡಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.