ಇದೊಂದು “ವಿನ್ನರ್’ ಅಧಿವೇಶನ: ಪ್ರಧಾನಿ
Team Udayavani, Apr 12, 2017, 6:32 AM IST
ಹೊಸದಿಲ್ಲಿ: ಹಲವು ವಿಷಯಗಳಿಗೆ ಸಂಬಂಧಿಸಿ ಸಂಸತ್ತಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದನ್ನು ಗಣನೆಗೆ ತೆಗೆದು ಕೊಳ್ಳದೆ ಪ್ರಧಾನಿ ಮೋದಿ, “ಜಿಎಸ್ಟಿ ಸೇರಿ ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿ ರುವ ಈ ಬಾರಿಯ ಬಜೆಟ್ ಅಧಿವೇಶನ, ಸರಕಾರದ ಪಾಲಿನ “ವಿನ್ನರ್’ ಅಧಿವೇಶನ,’ ಎಂದು ವ್ಯಾಖ್ಯಾನಿಸಿದ್ದಾರೆ.
ಸಂಸತ್ ಅಧಿವೇಶನ ಕೊನೆಗೊಳ್ಳುವ ಮುನ್ನಾದಿನವಾದ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿನ ಬಿಜೆಪಿ ಗೆಲುವನ್ನು, “ಬಡವರ ಪರ ಯೋಜನೆಗಳ ಕುರಿತು ಸರಕಾರ ತೋರಿದ ಬದ್ಧತೆಗೆ ಸಿಕ್ಕಿದ ಜನಮನ್ನಣೆ,’ ಎಂದು ಬಣ್ಣಿಸಿದ್ದಾರೆ. “ಬರುವ ತಿಂಗಳು ಸರಕಾರ 3 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ದೇಶದ ಜನರಿಂದ ದೊರೆತಿರುವ ಈ ಸಕಾರಾತ್ಮಕ ಸ್ಪಂದನೆ, ನಮ್ಮ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನಕಾರಿಯಾಗಿದೆ. ಎಲ್ಲ ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯವನ್ನು ಸಚಿವರು ಮಾಡಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.