RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!
ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದ ಕಾಂಗ್ರೆಸ್
Team Udayavani, Jun 14, 2024, 5:02 PM IST
ಹೊಸದಿಲ್ಲಿ: ಬಿಜೆಪಿ ಮತ್ತು ಆರ್ಎಸ್ಎಸ್ನ ಉನ್ನತ ನಾಯಕತ್ವದ ನಡುವಿನ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯೋ ಎಂಬಂತೆ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಗುರಿಯಾಗುತ್ತಿದೆ.
”ಅಹಂಕಾರಿಗಳನ್ನು(ಬಿಜೆಪಿ) 241ರಲ್ಲಿ, ರಾಮನಲ್ಲಿ ನಂಬಿಕೆ ಇಲ್ಲದವರು, ಅಪನಂಬಿಕೆ ಇದ್ದವರನ್ನು 234 ರಲ್ಲಿ ನಿಲ್ಲಿಸಲಾಯಿತು ಇದು ಭಗವಂತನ ನ್ಯಾಯ” ಎಂದು ಇಂದ್ರೇಶ್ ಕುಮಾರ್ ಹೇಳಿಕೆ ನೀಡಿ ಬಿಜೆಪಿ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ರಾಮರಥ ಅಯೋಧ್ಯೆ ಯಾತ್ರೆ ದರ್ಶನ ಪೂಜೆ ಸಮಾರಂಭದಲ್ಲಿ ಇಂದ್ರೇಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.’ 2024ರ ಲೋಕಸಭಾ ಚುನಾವಣೆಯನ್ನೇ ನೋಡಿ, ರಾಮ ಎಲ್ಲರಿಗೂ ನ್ಯಾಯ ಕೊಡಿಸುತ್ತಾನೆ. ರಾಮನನ್ನು ಪೂಜಿಸಿದವರು, ಆದರೆ ಕ್ರಮೇಣ ಅಹಂಕಾರಿಯಾದರು. ಆ ಪಕ್ಷವನ್ನು ಅತಿ ದೊಡ್ಡ ಪಕ್ಷವೆಂದು ಘೋಷಿಸಲಾಯಿತು. ಅವರಿಗೆ ಸಿಗಬೇಕಾದ ಸಂಪೂರ್ಣ ಹಕ್ಕುಗಳು ಮತ್ತು ಅಧಿಕಾರವು ಅಹಂಕಾರದಿಂದ ದೇವರಿಂದ ನಿಲ್ಲಿಸಲ್ಪಟ್ಟಿತು’ ಎಂದು ಹೇಳಿದ್ದಾರೆ.
ರಾಮನನ್ನು ವಿರೋಧಿಸುವವರಿಗೆ ಅಧಿಕಾರ ನೀಡಿಲ್ಲ. ಅವರ್ಯಾರಿಗೂ ಅಧಿಕಾರ ಕೊಟ್ಟಿಲ್ಲ. ಎಲ್ಲರೂ ಒಟ್ಟಾಗಿ (ಇಂಡಿಯಾ ಮೈತ್ರಿಕೂಟ ) ಸಹ ನಂಬರ್-1 ಆಗದೆ ನಂಬರ್-2 ರಲ್ಲಿ ನಿಂತಿತು. ಹಾಗಾಗಿ ದೇವರ ನ್ಯಾಯವು ವಿಚಿತ್ರವಲ್ಲ, ಇದು ನಿಜ ಮತ್ತು ಅತ್ಯಂತ ಆನಂದದಾಯಕವಾಗಿದೆ’ ಎಂದಿದ್ದಾರೆ.
ದ್ರೋಹಕ್ಕೆ ಇದು ಶಿಕ್ಷೆ
ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ರೂರಿ ಎಂದ ಇಂದ್ರೇಶ್, ‘ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಲಲ್ಲು ಸಿಂಗ್ , ರಾಮನನ್ನು ಪೂಜಿಸಿ ನಂತರ ಅಹಂಕಾರ ತೋರಿದರು.ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗಿದಾಗ, ರಾಮ ಐದು ವರ್ಷ ವಿಶ್ರಾಂತಿ ತೆಗೆದುಕೊಳ್ಳಿ, ಮುಂದಿನ ಬಾರಿ ನೋಡೋಣ ಎಂದು ಹೇಳಿದ್ದಾನೆ. ರಾಮನನ್ನು ವಿರೋಧಿಸುವವನ ಕಲ್ಯಾಣವು ಸ್ವಯಂ ಹಾಳಾಗುತ್ತದೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಕ್ರಿಯೆ
ಇಂದ್ರೇಶ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ‘ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಎಸ್ಎಸ್ ಅನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ’ ಎಂದಿದೆ.
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಾತನಾಡಬೇಕಾದ ಸಮಯದಲ್ಲಿ ಇಂದ್ರೇಶ್ ಕುಮಾರ್ ಮಾತನಾಡಿದ್ದರೆ ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಆ ಸಮಯದಲ್ಲಿ ಅವರು ಮೌನವಾಗಿದ್ದರು. ಅವರೂ ಅಧಿಕಾರ ಅನುಭವಿಸಿದ್ದಾರೆ’ ಎಂದರು.
ವೈಯಕ್ತಿಕ ಹೇಳಿಕೆ
ಇಂದ್ರೇಶ್ ಕುಮಾರ್ ನೀಡಿರುವ ಹೇಳಿಕೆ ಸಂಘದ ಹೇಳಿಕೆಯಲ್ಲ ಇದು ಅವರ ವೈಯಕ್ತಿಕ ಹೇಳಿಕೆ ಎಂದು ಆರ್ ಎಸ್ ಎಸ್ ಪ್ರತಿಕ್ರಿಯೆ ನೀಡಿದೆ.
ಯೂ ಟರ್ನ್
ಶುಕ್ರವಾರ ಇಂದ್ರೇಶ್ ಕುಮಾರ್ ಬಿಜೆಪಿಯನ್ನು ಹೊಗಳಿ ಮತ್ತೊಂದು ಹೇಳಿಕೆ ನೀಡಿದ್ದಾರೆ. ರಾಮನನ್ನು ವಿರೋಧಿಸಿದವರೆಲ್ಲರೂ ಅಧಿಕಾರದಿಂದ ಹೊರಗುಳಿದಿದ್ದಾರೆ, ಆದರೆ ರಾಮನ ಸಂಕಲ್ಪವನ್ನು ತೆಗೆದುಕೊಂಡವರು ಈಗ ಅಧಿಕಾರದಲ್ಲಿದ್ದಾರೆ ಎಂದು ವಿವಾದಕ್ಕೆ ಸಿಲಿಕಿದ ಹೇಳಿಕೆಗೆ ತೇಪೆ ಹಚ್ಚಲು ಯತ್ನಿಸಿದ್ದಾರೆ.
” ನರೇಂದ್ರ ಮೋದಿಜಿಯವರ ನೇತೃತ್ವದ ಸರ್ಕಾರವು ಮೂರನೇ ಬಾರಿಗೆ ರಚನೆಯಾಗಿದೆ. ಅವರ ನೇತೃತ್ವದಲ್ಲಿ ದೇಶವು ಹಗಲಿರುಳು ವೇಗವಾಗಿ ಅಭಿವೃದ್ಧಿ ಹೊಂದುತ್ತದೆ ಎಂಬ ವ್ಯಾಪಕ ನಂಬಿಕೆ ಜನರಲ್ಲಿದೆ. ಈ ನಂಬಿಕೆಯು ಪ್ರವರ್ಧಮಾನಕ್ಕೆ ಬರಲಿ ಎಂದು ನಾವು ಹಾರೈಸುತ್ತೇವೆ ಮತ್ತು ಹಾರೈಸುತ್ತೇವೆ. ಫಲ ನೀಡುತ್ತದೆ,” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.