Manipur ಉಗ್ರರಿಂದ 2 ಡ್ರೋನ್ ಬಾಂಬ್ ದಾಳಿ: 2 ಸಾವು, 12 ಮಂದಿಗೆ ಗಾಯ
ಮೈತೇಯಿಗಳು ಗುರಿ?
Team Udayavani, Sep 4, 2024, 6:45 AM IST
ಇಂಫಾಲ: ಇದೇ ಮೊದಲ ಬಾರಿಗೆ ಮಣಿಪುರದಲ್ಲಿ ಉಗ್ರರು ಡ್ರೋನ್ ಮೂಲಕ ಬಾಂಬ್ ದಾಳಿ ನಡೆಸಿದ ಘಟನೆ ವರದಿಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಗಲಭೆಪೀಡಿತ ಮಣಿಪುರದ ಕೋತ್ರುಕ್ ಮತ್ತು ಸೆನಜಮ್ ಚಿರಾಂಗ್ನಲ್ಲಿ ಸೋಮವಾರ ರಾತ್ರಿ ಉಗ್ರರು ಪ್ರತ್ಯೇಕ ಡ್ರೋನ್ ಬಾಂಬ್ಗಳನ್ನು ಸ್ಫೋಟಿಸಿದ್ದಾರೆ. ಈ ವೇಳೆ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಬಾಂಬ್ ದಾಳಿಯನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ನಾಗರಿಕರ ಮೇಲಿನ ಬಾಂಬ್ ದಾಳಿಯನ್ನು ಉಗ್ರ ಕೃತ್ಯ ಎಂದು ಬಣ್ಣಿ ಸಿದ್ದಾರೆ. ಅಲ್ಲದೆ ಈ ಕುರಿತು ತನಿಖೆ ನಡೆಸಲು 5 ಸದಸ್ಯರ ಸಮಿತಿಯನ್ನು ಮಣಿಪುರ ಸರಕಾರ ರಚಿಸಿದೆ. ಇವು ಮಣಿಪುರದಲ್ಲಿ ಡ್ರೋನ್ ಮೂಲಕ ಬಾಂಬ್ ದಾಳಿ ನಡೆಸಿದ ಮೊದಲ ಘಟನೆಗಳಾಗಿವೆ.
ಈ ಮಧ್ಯೆ ಮಣಿಪುರದಲ್ಲಿ ಡ್ರೋನ್ ಮೂಲಕ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯಾಲಯವು ಪೊಲೀಸ್ ಇಲಾಖೆಗೆ 2 ಪತ್ರಗಳನ್ನು ಬರೆದಿತ್ತು ಎಂಬ ಮಾಹಿತಿಯೂ ಬಹಿರಂಗವಾಗಿದೆ.
ಮೈತೇಯಿ ಹೆಚ್ಚಿರುವ ಕಡೆ ದಾಳಿ
ಮೈತೇಯಿ ಸಮುದಾಯದವರು ಹೆಚ್ಚಿರುವ ಪಶ್ಚಿಮ ಮಣಿಪುರ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಬಾಂಬ್ ದಾಳಿ ನಡೆಸಲಾಗಿದೆ. ಅಲ್ಲದೆ ಇದು ಕುಕಿ ಸಮುದಾಯದವರು ಹೆಚ್ಚಿರುವ ಕಾಂಗ್ಪೋಕಪಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿದೆ. ಹೀಗಾಗಿ ಕುಕಿ ಉಗ್ರರೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.