Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ
Team Udayavani, Sep 22, 2024, 7:15 AM IST
![tirupati](https://www.udayavani.com/wp-content/uploads/2024/09/tirupati-620x345.jpg)
![tirupati](https://www.udayavani.com/wp-content/uploads/2024/09/tirupati-620x345.jpg)
ಹೊಸದಿಲ್ಲಿ/ತಿರುಪತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾದ ವಿಷಯ ಭಾರೀ ವಿವಾದ ಸೃಷ್ಟಿಸಿರುವಂತೆಯೇ ದೇಗುಲದಲ್ಲಿ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ನಿರ್ಧರಿಸಿದೆ. ಈ ಡಿಸೆಂಬರ್ ಯಾ ಮುಂದಿನ ಜನವರಿ ಒಳಗೆ ವಿದೇಶದಿಂದ ಕಲಬೆರಕೆ ಪತ್ತೆ ಅಥವಾ ಗುಣಮಟ್ಟ ಪರೀಕ್ಷೆ ಯಂತ್ರವನ್ನು ತರಿಸಲಾಗುತ್ತದೆ ಎಂದು ದೇಗುಲ ಆಡಳಿತ ಮಂಡಳಿ ಹೇಳಿದೆ.
ಶನಿವಾರ ಮಾಧ್ಯಮವೊಂದರ ಜತೆಗೆ ಮಾತನಾಡಿ, ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ)ಯು ದೇಗುಲಕ್ಕೆ ಈ ಯಂತ್ರವನ್ನು ಕೊಡುಗೆಯಾಗಿ ನೀಡಲಿದೆ. ವರ್ಷಾಂತ್ಯ ಅಥವಾ ಜನವರಿಯೊಳಗಾಗಿ ಹೊಸ ಯಂತ್ರ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಅದನ್ನು ಆಮದು ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದಿದ್ದಾರೆ. ಟಿಟಿಡಿ ವತಿಯಿಂದ ನೀಡಲಾಗುವ ಆಹಾರ ಮತ್ತು ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸುವ, ಪರಿಶುದ್ಧತೆಯನ್ನು ಖಾತ್ರಿಪಡಿಸುವ ಎಲ್ಲ ವ್ಯವಸ್ಥೆಯನ್ನೂ ಅದು ಒಳಗೊಂಡಿರಲಿದೆ ಎಂದು ಶ್ಯಾಮಲ ರಾವ್ ಹೇಳಿದ್ದಾರೆ.
ಈಗಿನ ಪ್ರಯೋಗಾಲಯದಲ್ಲಿಯೇ ಪರೀಕ್ಷೆ
ಸ್ವಂತ ಯಂತ್ರ ಅಳವಡಿಕೆ ಆಗುವವರೆಗೆ ಲಡ್ಡು ಮತ್ತು ಇತರ ಪ್ರಸಾದ ಮತ್ತು ಆಹಾರಗಳ ಗುಣಮಟ್ಟ ಪರೀಕ್ಷೆಯನ್ನು ನಿಯಮಿತವಾಗಿ ನಡೆಸಲಾಗುತ್ತದೆ. ಅದನ್ನು ಈಗಿನ ಪ್ರಯೋಗಾಲಯದಲ್ಲಿಯೇ ನಡೆಸಲಾಗುತ್ತದೆ ಎಂದು ರಾವ್ ತಿಳಿಸಿದ್ದಾರೆ. ತುಪ್ಪವನ್ನು ಮೊದಲ ಹಂತದಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಜತೆಗೆ ಲಡ್ಡು ತಯಾರಿಸಲು ಬೇಕಾಗುವ ಇತರ ವಸ್ತುಗಳ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತದೆ ಎಂದು ಹೇಳಿದರು.
ಪ್ರಸಾದ ವಿತರಣೆ ಸ್ಥಳದಲ್ಲಿ ಪ್ರಯೋಗಾಲಯ ಸ್ಥಾಪಿಸಿ
ಇದೇ ವೇಳೆ ಪ್ರಸಾದ ವಿತರಣೆ ಮಾಡುವ ಸಾರ್ವಜನಿಕ ಸ್ಥಳಗಳಲ್ಲಿಯೇ ಅವುಗಳನ್ನು ಪರೀಕ್ಷೆಗೆ ಒಳಪಡಿಸಲು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ)ದ ಪ್ರಯೋಗಾಲಯಗಳನ್ನು ಸ್ಥಾಪಿಸ ಬೇಕು. ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಸಾಮೂಹಿಕವಾಗಿ ಪ್ರಸಾದ ವಿತರಣೆ ಮಾಡುವವರೇ ಭರಿಸುವಂತೆ ಆಗಬೇಕು ಎಂದು ಮಾಜಿ ಸಚಿವ ಸುರೇಶ್ ಪ್ರಭು ಸಲಹೆ ನೀಡಿದ್ದಾರೆ. ಜತೆಗೆ ಲ್ಯಾಬ್ ಪರೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಎಂದು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
![delhi](https://www.udayavani.com/wp-content/uploads/2025/02/delhi-7-150x82.jpg)
![delhi](https://www.udayavani.com/wp-content/uploads/2025/02/delhi-7-150x82.jpg)
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?