![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
![Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ](https://www.udayavani.com/wp-content/uploads/2025/02/ga-1-415x216.jpg)
Team Udayavani, Nov 2, 2024, 3:17 PM IST
ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಆಕೆಯ ಸಂಬಂಧಿಯೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಅದೇ ಕಾಲೋನಿಯಲ್ಲಿ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ (ನ.01) ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ. ಆಕೆಯನ್ನು ಕೊಂದು ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಹುಡುಕಾಟ ಆರಂಭಿಸಿದ್ದರು. ಕೊನೆಗೆ ಆಕೆಯನ್ನು ಆರೋಪಿಯೊಂದಿಗೆ ನೋಡಿದ್ದಾಗಿ ಹೇಳಿಕೊಂಡು ಪೊಲೀಸ್ ದೂರು ದಾಖಲಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ತಿಳಿಸಿದ್ದಾರೆ.
“ಆರೋಪಿ ಅನುಮಾನಾಸ್ಪದವಾಗಿ ವರ್ತಿಸಿದ. ನಾವು ವಿಚಾರಣೆ ನಡೆಸಿದಾಗ, ಆತ ಅಪರಾಧ ಒಪ್ಪಿಕೊಂಡ. ಆತ ಶಾಲೆಯ ಬಳಿಯ ತೆರೆದ ಮೈದಾನಕ್ಕೆ ಅವಳನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಅವನು ಆಕೆಯ ದೇಹವನ್ನು ಕೊಂದು ಹೊಲದಲ್ಲಿ ಹೂತು ಹಾಕಿದ್ದ” ಎಂದು ಎಸ್ಪಿ ಹೇಳಿದರು.
ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಂತ್ರಸ್ತೆಯ ತಾಯಿ ಆರೋಪಿಯನ್ನು ತನ್ನ ಸಹೋದರನಂತೆ ನೋಡಿಕೊಳ್ಳುತ್ತಿದ್ದಳು. ಆಗಾಗ ಅವರ ಮನೆಯಲ್ಲಿ ಸಮಯ ಕಳೆಯುತ್ತಿದ್ದರು ಮತ್ತು ಮಗುವಿನೊಂದಿಗೆ ಆಟವಾಡುತ್ತಿದ್ದರು ಎಂದು ಎಸ್ಪಿ ಹೇಳಿದ್ದಾರೆ.
“ಅವನು ಈ ರೀತಿ ಮಾಡುತ್ತಾನೆ ಎಂದು ಯಾರು ಅನುಮಾನಿಸುತ್ತಾರೆ? ಆತ ಕುಟುಂಬದ ಸದಸ್ಯರಂತೆ ಇದ್ದ” ಎಂದು ನೆರೆಹೊರೆಯವರು ಹೇಳಿದರು.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕುಟುಂಬಕ್ಕೆ 10 ಲಕ್ಷ ರೂ ಆರ್ಥಿಕ ನೆರವು ನೀಡಲು ಆದೇಶಿಸಿದ್ದಾರೆ. ನಾಳೆ ಗೃಹ ಸಚಿವೆ ಅನಿತಾ ವಂಗಲಪುಡಿ ಕುಟುಂಬವನ್ನು ಭೇಟಿ ಮಾಡಲಿದ್ದಾರೆ.
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ
Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್ಗೆ ಜಾಮೀನು
TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
You seem to have an Ad Blocker on.
To continue reading, please turn it off or whitelist Udayavani.