![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 6, 2023, 7:20 AM IST
ಕೋಲ್ಕತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರ ಅಳಿಯ, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾರನ್ನು ಸೋಮವಾರ ಕೋಲ್ಕತ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಅಭಿಷೇಕ್ ವಿರುದ್ಧದ ಕಲಿದ್ದಲು ಹಗರಣ ಪ್ರಕರಣದಲ್ಲಿ ರುಜಿರಾ ಅವರನ್ನೂ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣಿಸದಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುಬೈಗೆ ಪ್ರಯಾಣಿಸಬೇಕಿದ್ದ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆ 7 ಗಂಟೆಗೆ ರುಜಿರಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಕೋಲ್ಕತದ ನೇತಾಜಿ ಸುಭಾಷ್ ಚಂದ್ರಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ಇಮಿಗ್ರೇಷನ್ ವಿಭಾಗದಲ್ಲಿ ಅವರನ್ನು ತಡೆಹಿಡಿಯಲಾಗಿದೆ.
ಈ ಕುರಿತು ಬ್ಯಾನರ್ಜಿ ಪರ ವಕೀಲರು ಮಾತನಾಡಿ, ಪ್ರಯಾಣದ ಬಗ್ಗೆ ಕೆಲದಿನಗಳ ಹಿಂದೆಯೇ ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ವಿಮಾನದ ಟಿಕೆಟ್ ಕೂಡ ನೀಡಿದ್ದೆವು. ಆದರೆ ಅವರಿಂದ ಯಾವುದೇ ಉತ್ತರ ಬಂದಿರಲಿಲ್ಲ. ಈಗ ಏಕಾಏಕಿ ರುಜಿರಾ ಅವರು ತಡೆಹಿಡಿಯಲಾಗಿದೆ.
ಈ ಬಗ್ಗೆ ಮುಂದಿನ ಕಾನೂನು ಆಯ್ಕೆಗಳನ್ನು ಅನುಸರಿಸುತ್ತೇವೆ ಎಂದಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಈಗಾಗಲೇ ಹಲವು ಬಾರಿ ರುಜಿರಾ ಅವರನ್ನು ವಿಚಾರಣೆ ನಡೆಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.