ತಿತ್ಲಿಯನ್ನೂ ಮೀರಿಸಲಿದೆ ಫೋನಿ?
Team Udayavani, May 2, 2019, 6:10 AM IST
ಹೊಸದಿಲ್ಲಿ: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ “ಫೋನಿ’ ಚಂಡಮಾರುತವು ಪೂರ್ವ ಕರಾವಳಿಯತ್ತ ಚಲಿಸುತ್ತಿದ್ದು, ಶುಕ್ರವಾರ ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪುರಿಯ ದಕ್ಷಿಣ ಭಾಗದಲ್ಲಿರುವ ಗೋಪಾಲಪುರ ಮತ್ತು ಚಾಂದ್ಬಾಲಿ ನಡುವಿನ ಪ್ರದೇಶದಲ್ಲಿ ಗಂಟೆಗೆ 210 ಕಿ.ಮೀ. ವೇಗದಲ್ಲಿ ಫೋನಿ ಸಾಗುತ್ತಿದ್ದು, ದಡಕ್ಕೆ ಅಪ್ಪಳಿಸುವಾಗ ಇದರ ವೇಗ ಗಂಟೆಗೆ 205 ಕಿ.ಮೀ. ಇರುವ ಸಾಧ್ಯತೆಯಿದೆ.
ಕಳೆದ ವರ್ಷ ಒಡಿಶಾ- ಆಂಧ್ರ ಕರಾವಳಿಗೆ ಅಪ್ಪಳಿಸಿದ “ತಿತ್ಲಿ’ ಚಂಡಮಾರುತ ಕ್ಕಿಂತಲೂ ಫೋನಿ ಬಲಿಷ್ಠವಾಗಿದ್ದು, ಅಪಾರ ಪ್ರಮಾಣದ ಹಾನಿ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸೋಮವಾರ ಸಂಜೆಯೇ ಚಂಡಮಾರುತದ ತೀವ್ರತೆ ಹೆಚ್ಚಾಗಿದ್ದು, ಆಂಧ್ರಪ್ರದೇಶ, ಪಶ್ಚಿಮ ಬಂಗಾಲ, ಒಡಿಶಾದಲ್ಲಿ ಹೈಅಲರ್ಟ್ ಘೋಷಿಸ ಲಾಗಿದೆ. ಕರಾವಳಿ ಪ್ರದೇಶ ಗಳ ಜನರನ್ನು ಸ್ಥಳಾಂತರಿಸು ವಂತೆಯೂ ಸೂಚಿಸಲಾಗಿದೆ. ಜತೆಗೆ ಪುರಿಯಿಂದ ಎಲ್ಲರೂ ಮರಳುವಂತೆ ಪ್ರವಾಸಿಗರಿಗೆ ಒಡಿಶಾ ಸರಕಾರ ಸೂಚಿಸಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.
ಫೋನಿ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕಾಗಿ ಒಡಿಶಾದ 11 ಜಿಲ್ಲೆಗಳಲ್ಲಿ ಚುನಾವಣ ಆಯೋಗವು ನೀತಿ ಸಂಹಿತೆ ಯನ್ನು ವಾಪಸ್ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.