Trainee doctor ಅತ್ಯಾ*ಚಾರ, ಕೊ*ಲೆ ಕೇಸು: ಸಿಎಂ ಮಮತಾ ರಾಜೀನಾಮೆ ಅಸ್ತ್ರ!
Team Udayavani, Sep 13, 2024, 6:30 AM IST
ಕೋಲ್ಕತಾ: ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ವ್ಯಾಪಕ ಪ್ರತಿಭಟನೆ ಮುಂದುವರಿದಿರುವಂತೆಯೇ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ “ರಾಜೀನಾಮೆ ಅಸ್ತ್ರ’ ಪ್ರಯೋಗಿಸಿದ್ದಾರೆ. ಸಂತ್ರಸ್ತೆಗೆ ನ್ಯಾಯ ಒದಗಿಸುವುದಕ್ಕಾಗಿ ನಾನು ರಾಜೀನಾಮೆ ನೀಡಲೂ ಸಿದ್ಧ ಎಂದು ಗುರುವಾರ ಘೋಷಿಸಿದ್ದಾರೆ.
ಈ ಪ್ರಕರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತವಾಗಿದ್ದು ಅವರಿಗೆ ನ್ಯಾಯ ಬೇಕಿಲ್ಲ, ಅಧಿಕಾರ ಬೇಕಿದೆ. ನಾನು ಸಿಎಂ ಸ್ಥಾನದಿಂದ ಇಳಿದರೆ ನ್ಯಾಯ ಸಿಗುವುದಾದರೆ ಅದಕ್ಕೂ ಸಿದ್ಧ ಎಂದು ಹೇಳಿದ್ದಾರೆ. ಇದೇ ವೇಳೆ ಗುರುವಾರ ಸಂಜೆ ಪ್ರತಿಭಟನನಿರತ ವೈದ್ಯರೊಂದಿಗೆ ಮಾತುಕತೆ ನಡೆಸಲೆಂದು ಸರಕಾರ ಸಭೆ ಕರೆದಿತ್ತು. ಸಭಾಂಗಣದಲ್ಲಿ ಸುಮಾರು 2 ಗಂಟೆಗಳ ಕಾಲ ಕಾದರೂ ಒಬ್ಬರೂ ಬರಲಿಲ್ಲ ಎಂದು ಸಿಎಂ ಮಮತಾ ಆರೋಪಿಸಿದ್ದಾರೆ.
ಅನುಮಾನಾಸ್ಪದ ಚೀಲ ಪತ್ತೆ: ಆರ್.ಜಿ. ಕಾರ್ ಆಸ್ಪತ್ರೆ ಎದುರು ಸಂಶಯಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಪ್ರತಿಭಟನ ಸ್ಥಳದಲ್ಲೇ ಈ ಬ್ಯಾಗ್ ಇದ್ದದ್ದು ಆತಂಕ ಮೂಡಿಸಿತ್ತು. ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಆ ಚೀಲವನ್ನು ಪರಿಶೀಲಿಸಿದ್ದು, ಅಪಾಯಕಾರಿ ವಸ್ತು ಕಂಡುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.