![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 15, 2022, 9:28 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರು, ಶೋಪಿಯಾನ್ನ ಕಂಜಿಯುಲಾರ್ನಲ್ಲಿ ಪ್ರದೇಶದಲ್ಲಿ ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು ಕುಲ್ಗಾಮ್ ಜಿಲ್ಲೆಯಲ್ಲಿ ಜೂ. 6 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹೊಸಪೇಟೆ: ಲಾರಿಗೆ ಬಸ್ ಢಿಕ್ಕಿಯಾಗಿ 11 ಜನರಿಗೆ ಗಾಯ
ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.