ಡೆಲಿವರಿ ಏಜೆಂಟ್ ನನ್ನು ಅಡ್ಡಗಟ್ಟಿ ಲಕ್ಷಾಂತರ ರೂ ದೋಚಿದ ಬಂದೂಕುಧಾರಿಗಳು; ವಿಡಿಯೋ ನೋಡಿ
Team Udayavani, Jun 26, 2023, 4:32 PM IST
ಹೊಸದಿಲ್ಲಿ: ಕಾರಿನಲ್ಲಿ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಮತ್ತು ಆತನ ಸಹಚರನನ್ನು ಅಡ್ಡಗಟ್ಟಿದ ಬಂದೂಕುದಾರಿಗಳು ಎರಡು ಲಕ್ಷ ರೂ ದೋಚಿದ ಘಟನೆ ದಿಲ್ಲಿಯ ಪ್ರಗತಿ ಮೈದಾನ ಸುರಂಗ ಮಾರ್ಗದಲ್ಲಿ ನಡೆದಿದೆ.
ಹಣ ಕಳೆದುಕೊಂಡ ಅವರಿಬ್ಬರು ಹಣ ತಲುಪಿಸಲು ಕ್ಯಾಬ್ ನಲ್ಲಿ ಗುರುಗ್ರಾಮ್ ಕಡೆಗೆ ಹೋಗುತ್ತಿದ್ದಾಗ ಪ್ರಗತಿ ಮೈದಾನದ ಸುರಂಗದೊಳಗೆ ಆಘಾತಕಾರಿ ಘಟನೆ ಶನಿವಾರ ನಡೆದಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಜೂನ್ 24 ರಂದು ಪ್ರಗತಿ ಮೈದಾನದ ಸುರಂಗದೊಳಗೆ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಡೆಲಿವರಿ ಏಜೆಂಟ್ ಮತ್ತು ಅವರ ಸಹಚರರಿಂದ ಬಂದೂಕು ತೋರಿಸಿ 1.5 ರಿಂದ 2 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
1.5 ಕಿಮೀ ಸುರಂಗವು ನವದೆಹಲಿಯನ್ನು ಸರೈ ಕಾಲೇ ಖಾನ್ ಮತ್ತು ನೋಯ್ಡಾದೊಂದಿಗೆ ಸಂಪರ್ಕಿಸುತ್ತದೆ. ಸಂತ್ರಸ್ತರ ದೂರಿನ ನಂತರ, ಐಪಿಸಿ ಸೆಕ್ಷನ್ 397 (ದರೋಡೆ ಅಥವಾ ಸಾವು ಅಥವಾ ಘೋರವಾದ ಗಾಯವನ್ನು ಉಂಟುಮಾಡುವ ಪ್ರಯತ್ನದೊಂದಿಗೆ ಡಕಾಯಿತಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುರಂಗದಲ್ಲಿ ಅಳವಡಿಸಲಾದ ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾದ ದರೋಡೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಓಲಾ ಕ್ಯಾಬನ್ನು ತಡೆದು ನಿಲ್ಲಿಸಿದ್ದಾರೆ. ಕಾರನ್ನು ಕೆಂಪು ಕೋಟೆ ಪ್ರದೇಶದಲ್ಲಿ ಡೆಲಿವರಿ ಏಜೆಂಟ್ ಬುಕ್ ಮಾಡಿದ್ದರು. ಅದು ಸುರಂಗವನ್ನು ಪ್ರವೇಶಿಸುತ್ತಿದ್ದಂತೆ ಶಸ್ತ್ರಸಜ್ಜಿತ ದರೋಡೆಕೋರರು ಬೈಕ್ ಗಳಲ್ಲಿ ಬಂದು ಇಳಿಯುತ್ತಾರೆ. ಅವರಲ್ಲಿ ಒಬ್ಬರು ಕ್ಯಾಬ್ ನಲ್ಲಿರುವ ಇಬ್ಬರು ವ್ಯಕ್ತಿಗಳತ್ತ ಗನ್ ತೋರಿಸುತ್ತಿರುವುದು ಕಂಡುಬಂದರೆ, ಮತ್ತೊಬ್ಬರು ಹಿಂದಿನ ಸೀಟಿನಿಂದ ನಗದು ಚೀಲವನ್ನು ಸಂಗ್ರಹಿಸುವುದು ಸೆರೆಯಾಗಿದೆ.
#WATCH | A delivery agent and his associate were robbed at gunpoint of Rs 1.5 to Rs 2 lakh cash by a group of unknown assailants inside the Pragati Maidan Tunnel on June 24. Police registered a case and efforts are being made to apprehend the criminals: Delhi Police
(CCTV… pic.twitter.com/WchQo2lXSj
— ANI (@ANI) June 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
MUST WATCH
ಹೊಸ ಸೇರ್ಪಡೆ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.