ಬನಿಹಾಲ್ ದಾಳಿಯಲ್ಲಿ ಶಾಮೀಲಾಗಿದ್ದ ಇಬ್ಬರು ಉಗ್ರರ ಸೆರೆ
Team Udayavani, Sep 22, 2017, 11:27 AM IST
ಬನಿಹಾಲ್/ಜಮ್ಮು : ಜಮ್ಮು ಕಾಶ್ಮೀರದ ಬನಿಹಾಲ್ ಪಟ್ಟಿಯಲ್ಲಿ ಮೊನ್ನೆ ಬುಧವಾರ ಎಸ್ಎಸ್ಬಿ ಭದ್ರತಾ ತಂಡದವರ ಮೇಲೆ ನಡೆದಿದ್ದ ದಾಳಿಯಲ್ಲಿ ಶಾಮೀಲಾಗಿದ್ದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಉಗ್ರ ದಾಳಿಯಲ್ಲಿ ಓರ್ವ ಎಸ್ಎಸ್ಬಿ ಜವಾನ ಮೃತಪಟ್ಟು ಇನ್ನೋರ್ವ ಗಾಯಗೊಂಡಿದ್ದ. ಈ ಉಗ್ರ ದಾಳಿಯಲ್ಲಿ ಶಾಮೀಲಾಗಿದ್ದ ಗಜ್ನಫರ್ ಮತ್ತು ಆರಿಫ್ ಎಂಬ ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದರು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಬನಿಹಾಲ್ ಪಟ್ಟಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ 24 ತಾಸಿನೊಳಗೆ ಉಗ್ರರಿಬ್ಬರನ್ನು ಸೆರೆ ಹಿಡಿಯಲಾಗಿದೆ; ಅವರಿಂದ ಎರಡು ಸರ್ವಿಸ್ ರೈಫಲ್ಗಳು, ಎಕೆ ಅಸಾಲ್ಟ್ ರೈಫಲ್ ವಶಪಡಿಸಿಕೊಳ್ಳಲಾಗಿದೆ; ಇವುಗಳನ್ನು ಈ ಉಗ್ರರು ದಾಳಿಯ ವೇಳೆ ಜವಾನರಿಂದ ಕಸಿದು ಪರಾರಿಯಾಗಿದ್ದರು ಎಂದು ರಾಮಬನ್ ಎಸ್ಎಸ್ಪಿ, ಮೋಹನ್ ಲಾಲ್ ತಿಳಿಸಿದ್ದಾರೆ.
ಗಜ್ನಫರ್ ಮತ್ತು ಆರಿಫ್ ನನ್ನು ಚೀನಾಬ್ ಕಣಿವೆ ಪ್ರದೇಶದಲ್ಲಿ ಭಯೋತ್ಪಾದನೆ ನಡೆಸುವುದಕ್ಕಾಗಿ ನೇಮಕ ಮಾಡಲಾಗಿತು. ಅಕಿಬ್ ವಾಹೀದ್ ಎಂಬ ಇನ್ನೋರ್ವ ಉಗ್ರನ ಜತೆ ಸೇರಿ ಇವರು ಬನಿಹಾಲ್ ಪಟ್ಟಿಯಲ್ಲಿ ಯೋಧರ ಮೇಲೆ ದಾಳಿ ಎಸಗಿದ್ದರು. ದಾಳಿಯ ಬಳಿಕ ಪರಾರಿಯಾಗಿರುವ ವಾಹೀದ್ ಗಾಗಿ ಈಗ ವ್ಯಾಪಕ ಶೋಧ ನಡೆಯುತ್ತಿದೆ ಎಂದು ಎಸ್ಎಸ್ಪಿ ಹೇಳಿದ್ದಾರೆ.
21ರ ಹರೆಯದ ಗಜ್ನಫರ್ ಮತ್ತು 22 ಹರೆಯದ ಅಕಿಬ್ ವಾಹೀದ್ ಅನಂತ್ನಾಗ್ ಪದವಿ ಕಾಲೇಜಿನಲ್ಲಿ ಬಿಎಸ್ಸಿ ವಿದ್ಯಾರ್ಥಿಗಳಾಗಿದ್ದಾರೆ. ಇವರ ಕುಟುಂಬದವರಿಗೆ ಈ ಹಿಂದೆ ಹಿಜ್ಬುಲ್ ಮುಜಾಹಿದೀನ್ ನಂಟಿತ್ತು ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.