ಇನ್ನು ಕೇಂದ್ರೀಯ ವಿ.ವಿ. ಪದವಿಗೂ ಪ್ರವೇಶ ಪರೀಕ್ಷೆ

ಕೇಂದ್ರೀಯ ವಿ.ವಿ.ಗಳಲ್ಲಿ ಪಿಯು ಅಂಕಗಳಿಗಿಲ್ಲ ಮಾನ್ಯತೆ; ಯುಜಿಸಿ ಹೊಸ ನಿಯಮ; ಮುಂದಿನ ವರ್ಷವೇ ಜಾರಿ

Team Udayavani, Mar 23, 2022, 7:05 AM IST

ಇನ್ನು ಕೇಂದ್ರೀಯ ವಿ.ವಿ. ಪದವಿಗೂ ಪ್ರವೇಶ ಪರೀಕ್ಷೆ

ಹೊಸದಿಲ್ಲಿ: ಇನ್ನು ಮುಂದೆ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯ ಬೇಕೆಂದರೆ 12ನೇ ತರಗತಿಯ ಅಂಕಗಳು ಲೆಕ್ಕಕ್ಕೇ ಬರುವುದಿಲ್ಲ. ಬದಲಿಗೆ ವಿ.ವಿ.ಗಳು ನಡೆಸುವ ಪ್ರವೇಶ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರವೇಶ ನೀಡಲಾಗುತ್ತದೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾ ವಣೆ ಗಳಿಗೆ ನಾಂದಿ ಹಾಡುತ್ತಿರುವ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಇಂಥದ್ದೊಂದು ಹೊಸ ಆದೇಶ ಹೊರಡಿಸಿದೆ. ಎಲ್ಲ ಕೇಂದ್ರೀಯ ವಿ.ವಿ. ಗಳೂ ಕಡ್ಡಾಯ  ವಾಗಿ ಸಾಮಾನ್ಯ ವಿಶ್ವ ವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯನ್ನು ನಡೆಸಿ, ಅದರ ಅಂಕಗಳ ಆಧಾರದಲ್ಲೇ ಪ್ರವೇಶ ನೀಡಬೇಕು ಎಂದು ಹೇಳಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ(2022-23) ಇದು ಜಾರಿಯಾಗಲಿದೆ.
ಕಡ್ಡಾಯವಾಗಿ ಎಲ್ಲ 45 ಕೇಂದ್ರೀಯ ವಿ.ವಿ.ಗಳು ಇನ್ನು ಯುಜಿ ಕೋರ್ಸ್‌ಗಳಿಗೆ ಸಿಯುಇಟಿ ಪರೀಕ್ಷೆ ನಡೆಸಬೇಕು. ಆದರೆ ಸದ್ಯದ ಮಟ್ಟಿಗೆ ಸ್ನಾತಕೋತ್ತರ ಪ್ರವೇಶದ ವೇಳೆ ಸಿಯುಇಟಿ ಅಂಕಗಳ ಪರಿಗಣನೆಯನ್ನು ಆಯಾ ವಿ.ವಿ.ಗಳ ವಿವೇಚನೆಗೆ ಬಿಡಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ಹೇಳಿದ್ದಾರೆ.

ಜುಲೈಯಲ್ಲಿ ಪರೀಕ್ಷೆ
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಜುಲೈ ಮೊದಲ ವಾರದಲ್ಲಿ ಈ ಪ್ರವೇಶ ಪರೀಕ್ಷೆ(ಸಿಯುಇಟಿ) ಯನ್ನು ನಡೆಸಲಿದೆ. ಎಲ್ಲ ಪ್ರಶ್ನೆಗಳು 12ನೇ ತರಗತಿ ಸಿಬಿಎಸ್‌ಇ ಪಠ್ಯಕ್ರಮದ ಅಂಶಗಳನ್ನೇ ಒಳಗೊಂಡಿರಲಿದೆ. ಪರೀಕ್ಷೆ 2 ಹಂತಗಳಲ್ಲಿ ಮೂರೂವರೆ ಗಂಟೆ ಕಾಲ ನಡೆಯಲಿದೆ. ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತದೆ.
ರಂಗಭೂಮಿ, ಸಂಗೀತ ಮತ್ತಿತರ ಕೌಶಲ ಆಧರಿತ, ವೃತ್ತಿಪರ ಯುಜಿ ಕೋರ್ಸ್‌ಗಳಿಗೆ ವಿ.ವಿ.ಗಳು ಪ್ರಾಕ್ಟಿಕಲ್‌ ಪರೀಕ್ಷೆಗಳನ್ನು ಆಯೋಜಿಸಿ, ಅದರ ಅಂಕಗಳನ್ನು ವಿದ್ಯಾರ್ಥಿಯ ಅಂತಿಮ ಸಿಯುಇಟಿ ಸ್ಕೋರ್‌ಗೆ ಸೇರ್ಪಡೆ ಮಾಡಬೇಕು.

ಇದನ್ನೂ ಓದಿ:ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ

ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ
ಸಿಯುಇಟಿ ಎನ್ನುವುದು ಕಂಪ್ಯೂಟರೀಕೃತ ಪರೀಕ್ಷೆಯಾಗಿದ್ದು, ಕನ್ನಡ, ಇಂಗ್ಲಿಷ್‌, ಹಿಂದಿ, ಗುಜರಾತಿ, ಅಸ್ಸಾಮಿ, ಬಂಗಾಲಿ, ಮಲಯಾಳ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನಡೆಯಲಿದೆ. ವಿಶೇಷವೆಂದರೆ ವಿದೇಶಿ ವಿದ್ಯಾರ್ಥಿಗಳಿಗೆ ಈ ಪ್ರವೇಶ ಪರೀಕ್ಷೆಯಿಂದ ಯುಜಿಸಿ ವಿನಾಯಿತಿ ನೀಡಿದೆ.

ಮೀಸಲಾತಿ ಮೇಲೆ ಪರಿಣಾಮವಿಲ್ಲ
ಯಾವುದಾದರೂ ವಿ.ವಿ.ಯು ಸ್ಥಳೀಯ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಮೀಸಲಾತಿ ನೀಡುತ್ತಾ ಬಂದಿದ್ದರೆ ಆ ಮೀಸಲಾತಿಯು ಮುಂದುವರಿಯುತ್ತದೆ. ಆದರೆ ಈ ವಿದ್ಯಾರ್ಥಿಗಳು ಕೂಡ ಸಿಯುಇಟಿ ಬರೆದೇ ಪ್ರವೇಶ ಪಡೆಯಬೇಕು.

 

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.