ವೈನ್ ಶಾಪ್ ಎದುರು ದನ ಕಟ್ಟಿ ‘ಮದ್ಯ ಬೇಡ ಹಾಲು ಕುಡಿಯಿರಿ’ ಎಂದ ಉಮಾ ಭಾರತಿ
Team Udayavani, Feb 3, 2023, 12:37 PM IST
ಭೋಪಾಲ್: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕಿ ಉಮಾಭಾರತಿ ಅವರು ಗುರುವಾರ ಮಧ್ಯಪ್ರದೇಶದ ಓರ್ಚಾ ಪಟ್ಟಣದ ಮದ್ಯದಂಗಡಿಯೊಂದರ ಮುಂದೆ ಬಿಡಾಡಿ ಹಸುಗಳನ್ನು ಕಟ್ಟಿಹಾಕಿ, ಅವುಗಳಿಗೆ ಹುಲ್ಲು ತಿನ್ನಿಸಿ ಜನರು ಮದ್ಯ ತ್ಯಜಿಸಿ ಹಸುವಿನ ಹಾಲು ಕುಡಿಯಬೇಕು ಎಂದು ಕರೆ ನೀಡಿದರು.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ರಾಜ್ಯದಲ್ಲಿ ಮದ್ಯ ಸೇವನೆಯ ವಿರುದ್ಧದ ಅಭಿಯಾನದ ನೇತೃತ್ವ ವಹಿಸಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಸರ್ಕಾರವು ಜನರ ಮದ್ಯಪಾನದ ಅಭ್ಯಾಸವನ್ನು ಉಪಯೋಗ ಮಾಡಿಕೊಳ್ಳಬಾರದು ಎಂದರು.
ಇದನ್ನೂ ಓದಿ:ಹಾಲಿನ ದರ ಹೆಚ್ಚಳ ಮಾಡಿದ ಅಮುಲ್: ಹೊಸ ದರಗಳು ಇಂದಿನಿಂದಲೇ ಜಾರಿಗೆ
ದೇವಾಲಯಗಳು ಮತ್ತು ಅರಮನೆಗಳಿಗೆ ಹೆಸರುವಾಸಿಯಾದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಐಎಂಎಫ್ಎಲ್ ಮಾರಾಟ ಮಾಡುವ ಅಂಗಡಿಯ ಮುಂದೆ ಹಸುಗಳನ್ನು ಕಟ್ಟಿ ಹಾಕಿದರು. ಬಳಿಕ ‘ಶರಾಬ್ ನಹಿ, ದೂದ್ ಪಿಯೋ (ಮದ್ಯವಲ್ಲ, ಹಾಲು ಕುಡಿಯಿರಿ) ಎಂಬ ಘೋಷಣೆಯನ್ನು ಕೂಗಿದರು.
ಕಳೆದ ವರ್ಷ ಜೂನ್ ನಲ್ಲಿ ಇದೇ ಮದ್ಯದಂಗಡಿಗೆ ಉಮಾ ಭಾರತಿ ಅವರು ಹಸುವಿನ ಸಗಣಿ ಎಸೆದಿದ್ದರು. 2022 ರ ಮಾರ್ಚ್ ನಲ್ಲಿ ಭೋಪಾಲ್ ನ ಮದ್ಯದ ಅಂಗಡಿಯೊಂದಕ್ಕೆ ಕಲ್ಲು ತೂರಿದ್ದರು.
ಜನರ ಕುಡಿತದ ಸಮಸ್ಯೆಗೆ ತಾವೂ ಸ್ವಲ್ಪ ಮಟ್ಟಿಗೆ ಜವಾಬ್ದಾರರು ಎಂದು ಉಮಾ ಭಾರತಿ ಹೇಳಿದರು 2003 ರ ವಿಧಾನಸಭಾ ಚುನಾವಣೆಯಲ್ಲಿ ತಾನು ಬಿಜೆಪಿಗಾಗಿ ಮತಯಾಚನೆ ಮಾಡಿದ್ದನ್ನು ನೆನಪಿಸಿಕೊಂಡರು. ಅಂದಿನಿಂದ 2018-2020 ರಲ್ಲಿ 15 ತಿಂಗಳುಗಳನ್ನು ಹೊರತುಪಡಿಸಿ ಪಕ್ಷವು ಮಧ್ಯ ಪ್ರದೇಶದಲ್ಲಿ ಅಧಿಕಾರದಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
MUST WATCH
ಹೊಸ ಸೇರ್ಪಡೆ
Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.