ಮಧ್ಯರಾತ್ರಿ ಮಿಶನ್‌ ಕಾಶ್ಮೀರ: ಮೆಹಬೂಬಾ,ಒಮರ್‌ ಗೃಹ ಬಂಧನ

ಇಂದಿನ ಸಂಪುಟದಲ್ಲಿ ಮಹತ್ವದ ನಿರ್ಧಾರ ನಿರೀಕ್ಷೆ; ಸೆಕ್ಷನ್‌ 144 ಜಾರಿ; ಕಾಶ್ಮೀರದಲ್ಲಿ ಶಾಲೆಗಳಿಗೆ ರಜೆ

Team Udayavani, Aug 5, 2019, 1:10 AM IST

c-30

ಹೊಸದಿಲ್ಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರವಿವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬಾ ಮುಫ್ತಿ, ಒಮರ್‌ ಅಬ್ದುಲ್ಲಾ, ಸಜ್ಜದ್‌ ಲೋನ್‌, ಶಾಸಕ ಎಂ.ವೈ. ತಾರಿಗಾಮಿ, ಉಸ್ಮಾನ್‌ ಮಜೀದ್‌ ಸಹಿತ ಪ್ರಮುಖರನ್ನು ಗೃಹ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಮ್ಮನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಒಮರ್‌ ಟ್ವೀಟ್‌ ಮಾಡಿದ್ದರೂ, ಅದನ್ನು ಅಧಿಕೃತವಾಗಿ ಖಚಿತಪಡಿಸಲಾಗಿಲ್ಲ. ಬೆಳವಣಿಗೆಗೆ ಮುನ್ನ ಟ್ವೀಟ್‌ ಮಾಡಿದ್ದ
ಒಮರ್‌ ಅಬ್ದುಲ್ಲಾ, “ಇನ್ನು, ಕೆಲವೇ ಕ್ಷಣಗಳಲ್ಲಿ ನನ್ನ ಗೃಹ ಬಂಧನವಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ಇಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಕೆಲವು ನಾಯಕರ ಗೃಹ ಬಂಧನವಾಗಿರುವುದನ್ನು ಕೇಳಿದ್ದು, ನನ್ನ ಬಂಧನವೂ ಮಧ್ಯರಾತ್ರಿಯಿಂದ ಜಾರಿ ಗೊಳ್ಳಬಹುದು’ ಎಂದಿದ್ದರು.

ರಾಜ್ಯಪಾಲರಿಂದ ಸಭೆ
ಈ ಎಲ್ಲ ಬೆಳವಣಿಗೆಗಳ ನಡುವೆ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರ ಡಿಜಿಪಿ, ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಸಂಪುಟ ಸಭೆಗೂ ಮುನ್ನ ರೋಚಕತೆ
ಜಮ್ಮು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಚರ್ಚಿಸಲು ಸೋಮವಾರ ಬೆಳಗ್ಗೆ 9.30ಕ್ಕೆ ಕೇಂದ್ರ ಸಚಿವ ಸಂಪುಟದ ಸಭೆ ಕರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯು ಕಾಶ್ಮೀರ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳು ಚರ್ಚೆಯಾಗಲಿವೆ ಎಂದು ಅಂದಾಜಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಆ ರಾಜ್ಯದ ನಾಯಕರನ್ನು ಗೃಹಬಂಧನದಲ್ಲಿ ಇರಿಸಿರುವುದು, ಸೆಕ್ಷನ್‌ 144 ಜಾರಿಗೊಳಿಸಿರುವುದು ಸರಕಾರದ ನಡೆಯನ್ನು ಮತ್ತಷ್ಟು ನಿಗೂಢವಾಗಿಸಿದೆ.

ಇಂಟರ್‌ನೆಟ್‌ ಸೇವೆ ಕಡಿತ
ಕಣಿವೆ ರಾಜ್ಯದಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಕಡಿತಗೊಳಿಸಲಾಗಿದೆ. ಸಾರ್ವಜನಿಕರು ಮನೆಗಳಿಂದ ಹೊರ ಬರದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ಫ್ಯೂ ಜಾರಿ ಮಾಡಿಲ್ಲ
ಕಾಶ್ಮೀರದಲ್ಲಿ ಸೆಕ್ಷನ್‌ 144 ಜಾರಿಗೊಂಡ ಹಿನ್ನೆಲೆಯಲ್ಲಿ ಪ್ರಕಟನೆ ಹೊರಡಿಸಿರುವ ಜಮ್ಮು ಕಾಶ್ಮೀರ ಸರಕಾರವು ಶ್ರೀನಗರ, ರಿಯಾಸಿ ಜಿಲ್ಲೆಗಳಲ್ಲಿ ರವಿವಾರ ಮಧ್ಯರಾತ್ರಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ವರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಭೆಗಳು, ರ್ಯಾಲಿಗಳನ್ನು ನಡೆಸುವಂತಿಲ್ಲ. ತುರ್ತು ಸಿಬಂದಿ ಕಡ್ಡಾಯವಾಗಿ ತಮಗೆ ನೀಡಿರುವ ಗುರುತಿನ ಚೀಟಿಗಳನ್ನು (ಐಡಿ ಕಾರ್ಡ್‌ಗಳನ್ನು) ಧರಿಸಿಕೊಂಡೇ ಓಡಾಡಬೇಕು ಎಂದಿದೆ. ಆದರೆ ಎಲ್ಲೆಡೆ ಕರ್ಫ್ಯೂ ಹೇರಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದು, ಎಲ್ಲೂ ಕರ್ಫ್ಯೂ ಹೇರಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಮೈಕ್‌ ಮೂಲಕ ಸೆಕ್ಷನ್‌ ಜಾರಿಯನ್ನು ಘೋಷಿಸಿದ್ದಾರೆ.

ಶ್ರೀನಗರ ಹಾಗೂ ರಿಯಾಸಿ ಜಿಲ್ಲೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಜಾರಿಗೊಳ್ಳುವಂತೆ ಅನಿರ್ದಿ ಷ್ಟಾವಧಿಯವರೆಗೆ 144ನೇ ಸೆಕ್ಷನ್‌ ಜಾರಿಗೊಳಿಸಲಾಗಿದೆ. ಜಮ್ಮುವಿಗೆ ಹೆಚ್ಚುವರಿ ಸೇನಾ ತುಕಡಿಗಳನ್ನು ಕರೆಯಿಸಿಕೊಳ್ಳಲಾಗಿದೆ. ಶಾಲಾ, ಕಾಲೇಜು ಸಹಿತ ಎಲ್ಲ ರೀತಿಯ ಶೈಕ್ಷಣಿಕ ಸಂಸ್ಥೆಗಳಿಗೆ ಮುಂದಿನ ಆದೇಶದ ವರೆಗೆ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.