Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್
ಸಿಎಂ ಹೇಳಿಕೆ ವಿಷಾದನೀಯ ಎಂದ ಸಮಾಜವಾದಿ ಪಕ್ಷ
Team Udayavani, Sep 14, 2024, 6:39 PM IST
ಲಕ್ನೋ: ”ಜ್ಞಾನವಾಪಿಯನ್ನು ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ ಮತ್ತು ಜ್ಞಾನವಾಪಿ ಭಗವಾನ್ ವಿಶ್ವನಾಥನ ಸಾಕಾರ”ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ.
ದೀನ್ ದಯಾಳ್ ಉಪಾಧ್ಯಾಯ ಗೋರಖ್ಪುರ ವಿಶ್ವವಿದ್ಯಾನಿಲಯದಲ್ಲಿ “ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ನಾಥಪಂಥದವರ ಕೊಡುಗೆ” ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಆದಿತ್ಯನಾಥ್ ಈ ಹೇಳಿಕೆಗಳನ್ನು ನೀಡಿದ್ದಾರೆ.
ಅವರು ಕಾಶಿಯ ಆಧ್ಯಾತ್ಮಿಕ ಮಹತ್ವ ಮತ್ತು ಜ್ಞಾನವಾಪಿಯ ಧಾರ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಸಿಎಂ ಯೋಗಿ, ಆದಿ ಶಂಕರರ ವಿವರವಾದ ಉಲ್ಲೇಖದಲ್ಲಿ ಕಾಶಿಯಲ್ಲಿ ಭಗವಾನ್ ವಿಶ್ವನಾಥ ಬಗ್ಗೆ ಒಂದು ಉಪಾಖ್ಯಾನವನ್ನು ವಿವರಿಸುತ್ತದೆ ಎಂದರು.
ಸಮಾಜವಾದಿ ಪಕ್ಷದ ವಕ್ತಾರ ಅಬ್ಬಾಸ್ ಹೈದರ್ ಪಿಟಿಐಗೆ ಯೋಗಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ”ಯೋಗಿ ಆದಿತ್ಯನಾಥ್ ನ್ಯಾಯಾಲಯಕ್ಕೆ ಗೌರವವನ್ನು ನೀಡುವುದಿಲ್ಲ ಎಂದು ತೋರುತ್ತದೆ. ಈ ವಿಚಾರ ನ್ಯಾಯಾಲಯದಲ್ಲಿ ಬಾಕಿ ಇದೆ. ಮುಖ್ಯಮಂತ್ರಿಗಳು ಸಂವಿಧಾನದ ಪ್ರತಿಜ್ಞೆ ಮಾಡಿದರೂ ನ್ಯಾಯಾಲಯಕ್ಕೆ ಸರಿಯಾದ ಗೌರವ ನೀಡದಿರುವುದು ವಿಷಾದನೀಯ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.