![2-bntwl](https://www.udayavani.com/wp-content/uploads/2024/12/2-bntwl-415x249.jpg)
ಕೃಷಿಗೆ ಬಜೆಟ್ ಬಲ ನಿರೀಕ್ಷೆ
Team Udayavani, Jan 23, 2021, 6:30 AM IST
![ಕೃಷಿಗೆ ಬಜೆಟ್ ಬಲ ನಿರೀಕ್ಷೆ](https://www.udayavani.com/wp-content/uploads/2021/01/Untitled-1-340-620x372.jpg)
ಹೊಸದಿಲ್ಲಿ: ಫೆ.1ರಂದು ಮಂಡಿಸಲಾಗುವ ಬಜೆಟ್ನಲ್ಲಿ ಕೇಂದ್ರ ಸರಕಾರವು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ಮೀಸಲಿಡಬಹುದು ಎಂಬ ನಿರೀಕ್ಷೆ ಮೂಡಿದೆ.
ಈಗಾಗಲೇ ಕೇಂದ್ರ ಸರಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹಾಕಿಕೊಂಡಿರುವುದಾಗಿ ಹೇಳಿಕೊಂಡೇ ಬಂದಿದೆ. ಅದರಂತೆ ಈ ಉದ್ದೇಶ ಸಾಧಿಸ ಬೇಕೆಂದರೆ ಕೃಷಿ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ರೈತ ಸಮೂಹವನ್ನು ಬಲಿಷ್ಠ ಗೊಳಿಸುವಿಕೆ, ಆಹಾರ ಸಂಸ್ಕೃ ರಣೆ ಮತ್ತಿತರ ವಿಚಾರಗಳ ಮೇಲೆ ಗಮನ ಕೇಂದ್ರೀಕರಿಸಬೇಕಾಗುತ್ತದೆ.
ಈ ಹಿಂದೆಯೇ ಘೋಷಿಸಲಾದ 10 ಸಾವಿರ ಹೊಸ ರೈತ ಉತ್ಪಾದಕರ ಸಂಸ್ಥೆಗಳು(ಎಫ್ಪಿಒ) ನಾಯಕತ್ವ, ಸಾಮರ್ಥ್ಯ ಮತ್ತು ಪರಿಣಾಮಕಾರಿ ಮೂಲಸೌಕರ್ಯದ ಕೊರತೆಯಿಂದ ಬಳಲು ತ್ತಿವೆ. ಹೀಗಾಗಿ ಪ್ರಸ್ತುತ ರಚನೆಯಾಗಿರುವ ಈ ಸಂಸ್ಥೆಗಳನ್ನು ಬಲಿಷ್ಟಗೊಳಿಸಲು ಸೂಕ್ತ ಹಣಕಾ ಸಿನ ನೆರವು ನೀಡುವತ್ತ, ಮಾರುಕಟ್ಟೆಯೊಂದಿಗೆ ಸಣ್ಣ ರೈತರು ಸಂಪರ್ಕ ಸಾಧಿಸಲು ಅಗತ್ಯವಾದ ಇನ್ನಷ್ಟು ಎಫ್ಪಿಒಗಳನ್ನು ರಚಿಸುವತ್ತ ಸರಕಾರ ಹೆಜ್ಜೆ ಹಾಕಬೇಕು ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ.
2021ರ ವಿತ್ತ ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು.
ಆರೋಗ್ಯ, ಶಿಕ್ಷಣ ಸೆಸ್ ಶೇ.2ರಷ್ಟು ಏರಿಕೆ? :
ಬಜೆಟ್ನಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶೇ.2ರ ವರೆಗೆ ಸೆಸ್ ಹೆಚ್ಚಿ ಸಲು ವಿಧಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ವಿತ್ತ ಸಚಿವಾಯ ಮತ್ತು ಕಂದಾಯ ವಿಭಾಗ ಈ ಬಗ್ಗೆ ಪರಾಮರ್ಶೆ ನಡೆಸುತ್ತಿದೆ. ಸದ್ಯ ಆರೋಗ್ಯ ಕ್ಷೇತ್ರದ ಮೇಲೆ ಶೇ.4 ಸೆಸ್ ವಿಧಿಸಲಾಗುತ್ತಿದೆ. ಎರಡೂ ಕ್ಷೇತ್ರಗಳಿಂದ 30 ಸಾವಿರ ಕೋಟಿ ರೂ. ಬೊಕ್ಕಸಕ್ಕೆ ಬರುತ್ತದೆ.
ಟಾಪ್ ನ್ಯೂಸ್
![2-bntwl](https://www.udayavani.com/wp-content/uploads/2024/12/2-bntwl-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
![2-bntwl](https://www.udayavani.com/wp-content/uploads/2024/12/2-bntwl-150x90.jpg)
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.