![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 14, 2020, 11:13 PM IST
ಮಥುರಾ: ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎನ್ನಲಾಗುತ್ತಿರುವ ಭಾರತೀಯ ಹಸುವಿನ ಸಗಣಿಯ ಕುರಿತಾದಂತೆ ಸುಧಾರಿತ ಸಂಶೋಧನೆಗಳನ್ನು ನಡೆಸುವಂತೆ ಕೇಂದ್ರ ಸಚಿವ ಹಾಗೂ ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ಅವರು ವಿಜ್ಞಾನಿ ಸಮುದಾಯವನ್ನು ಆಗ್ರಹಿಸಿದ್ದಾರೆ.
ಸಗಣಿಯ ವೈಜ್ಞಾನಿಕ ಮಹತ್ವದ ಕುರಿತಾಗಿ ಹೆಚ್ಚಿನ ಸಂಶೋಧನೆಯನ್ನು ನಡೆಸುವ ಮೂಲಕ ಇದರ ಲಾಭವನ್ನು ನಮ್ಮ ರೈತರಿಗೆ ವರ್ಗಾಯಿಸಬಹುದಾಗಿರುತ್ತದೆ ಮತ್ತು ಇದರಿಂದಾಗಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿದ ಬಳಿಕವೂ ಅವುಗಳನ್ನು ಸಾಕಲು ರೈತರಿಗೆ ಒಂದು ಅವಕಾಶ ಉಂಟಾಗುತ್ತದೆ ಎಂದು ಸಚಿವ ಗಿರಿರಾಜ್ ಸಿಂಗ್ ಅವರು ಅಭಿಪ್ರಾಯಪಟ್ಟರು.
ನಮ್ಮ ರೈತರು ತಮ್ಮಲ್ಲಿರುವ ಹಸುಗಳ ಸಗಣಿ ಮತ್ತು ಮೂತ್ರದಿಂದ ಹೆಚ್ಚಿನ ಆದಾಯವನ್ನು ಗಳಿಸಲು ಸಾಧ್ಯವಾಗುವುದಾದರೆ ಅದೊಂದು ಒಳ್ಳೆಯ ವಿಷಯವೇ. ಆದರೆ ಅದಕ್ಕೆ ಪೂರಕವಾಗುವಂತೆ ಕೆಲವೊಂದು ಸಂಶೋಧನೆಗಳು ನಮ್ಮ ವಿಜ್ಞಾನಿಗಳ ಮಟ್ಟದಿಂದ ಆಗಬೇಕಾಗಿದೆ ಎಂದು ಗಿರಿರಾಜ್ ಸಿಂಗ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಜನರು ಹೇಗೆ ಭಗವದ್ಗೀತೆ, ಕುರಾನ್ ಮತ್ತು ರಾಮಾಯಣದ ವಿಚಾರಗಳನ್ನು ಓದಿಕೊಂಡು ಮನನ ಮಾಡಿಕೊಳ್ಳುತ್ತಾರೋ ಹಾಗೆಯೇ ತಾನು ಮಹಾತ್ಮಾ ಗಾಂಧಿ, ಲೋಹಿಯಾ ಮತ್ತು ದೀನ್ ದಯಾಳ್ ಉಪಾಧ್ಯಾಯ ಅವರ ಆದರ್ಶಗಳನ್ನು ಸದಾ ಪಾಲಿಸುತ್ತೇನೆ ಎಂದು ಗಿರಿರಾಜ್ ಸಿಂಗ್ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.