![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 13, 2020, 5:32 PM IST
ನವದೆಹಲಿ: ಪೌರತ್ವ ತಿದ್ದುಪಡಿ ವಿರೋಧಿಸಿ ನಡೆಸುವ ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾಳುಗೆಡಹುವ ಕಿಡಿಗೇಡಿಗಳನ್ನು ‘ನಾಯಿಗೆ ಹೊಡೆಯುವಂತೆ ಶೂಟ್ ಮಾಡಿ ಸಾಯಿಸಿ’ ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಲದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ವಿರುದ್ಧ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಕಿಡಿಕಾರಿದ್ದಾರೆ.
ದಿಲೀಪ್ ದಾದಾ ಅವರ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದ್ದಾಗಿದೆ ಮತ್ತು ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸುಪ್ರಿಯೋ ಅವರು ಹೇಳಿದ್ದಾರೆ.
‘ಅವರ ಈ ಹೇಳಿಕೆ ಸಂಪೂರ್ಣವಾಗಿ ಅವರದ್ದೇ ಕಲ್ಪನೆಯದ್ದಾಗಿದೆ ಮತ್ತು ಉತ್ತರಪ್ರದೇಶ ಅಥವಾ ಅಸ್ಸಾಂನಲ್ಲಿ ಅಧಿಕಾರದಲ್ಲಿರುವ ಬಾರತೀಯ ಜನತಾ ಪಕ್ಷದ ಸರಕಾರಗಳು ಯಾವುದೇ ಕಾರಣಕ್ಕೂ ಜನರ ಮೆಲೆ ಗುಂಡಿನ ದಾಳಿ ನಡೆಸಲು ಎಂದೂ ಹೇಳಿಲ್ಲ’ ಎಂದು ಸುಪ್ರಿಯೋ ಅವರು ಸ್ಪಷ್ಟನೆ ನೀಡಿದ್ದಾರೆ.
ಪೌರತ್ವ ವಿರೋಧಿ ಪ್ರತಿಭಟನೆಗಳ ನೆಪದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡುವವರನ್ನು ಉತ್ತರಪ್ರದೇಶದಲ್ಲಿ ಮಾಡಿದಂತೆ ಶೂಟ್ ಮಾಡಿ ಬಿಸಾಡಬೇಕು ಎಂಬರ್ಥದಲ್ಲಿ ದಿಲೀಪ್ ಘೋಷ್ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಡಿಸೆಂಬರ್ ತಿಂಗಳಿನಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ಸಿಎಎ ವಿರೋಧಿ ಹೋರಾಟದಲ್ಲಿ 19 ಜನರು ಮೃತಪಟ್ಟಿದ್ದರು.
BJP, as a party has nothing to do with what a DIlipGhosh may hv said•It is a figment of his imagination&BJP Govts in UP, Assam hv NEVER EVER resorted to shooting people for whatever reason whatsoever•Very irresponsible of DilipDa to hv said what he said https://t.co/aXF8pmJtAR
— Babul Supriyo (@SuPriyoBabul) January 13, 2020
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.