![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 15, 2018, 8:20 AM IST
ಹೊಸದಿಲ್ಲಿ: ಪಂಚರಾಜ್ಯ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯಿಂದ ಕಂಗೆಟ್ಟಿರುವ ಕೇಂದ್ರದ ನರೇಂದ್ರ ಮೋದಿ ಸರಕಾರ ಮುಂಬರುವ ಬಜೆಟ್ನಲ್ಲಿ ‘ಬಂಪರ್ ಕೊಡುಗೆ’ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಮಹತ್ವಾಕಾಂಕ್ಷೆಯ ‘ಸಾರ್ವತ್ರಿಕ ಮೂಲ ಆದಾಯ’ (ಯುಬಿಐ) ಯೋಜನೆ ಜಾರಿ ಸಂಬಂಧ ಗಂಭೀರ ಚಿಂತನೆ ನಡೆಸಿದೆ. ಜಾರಿಗೆ ಬಂದಲ್ಲಿ ಬಡಕುಟುಂಬದ ಪ್ರತಿಯೊಬ್ಬರಿಗೂ ಮಾಸಿಕ 1000 ರೂ. ಸಹಾಯಧನ ಸಿಗಲಿದೆ.
ಫೆ.1ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದು, ಉತ್ತರ ಭಾರತದ ರಾಜ್ಯಗಳಿಗೆ ವಿಶೇಷ ಮಾನ್ಯತೆ ನೀಡುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಸದ್ಯಕ್ಕೆ ಇದು ಚರ್ಚೆಯ ಹಂತದಲ್ಲಿದ್ದು, ಬಜೆಟ್ ಮಂಡನೆಯೊಳಗೆ ಪಕ್ಕಾ ಸ್ವರೂಪ ಪಡೆದುಕೊಳ್ಳಲಿದೆ. ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಸೋಲಿನ ಹೊಡೆತವನ್ನು ತಪ್ಪಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಬಡತನ ನಿರ್ಮೂಲನೆ ಉದ್ದೇಶದೊಂದಿಗೆ ಬಜೆಟ್ನಲ್ಲಿ ‘ಸಾರ್ವತ್ರಿಕ ಮೂಲ ಆದಾಯ’ ಯೋಜನೆ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. “ಈ ಯೋಜನೆಯಡಿ ಬಡ ಕುಟುಂಬಕ್ಕೆ ಪ್ರತಿ ತಿಂಗಳೂ ನಿಗದಿತ ಸಹಾಯಧನ ನೀಡಲಾಗುತ್ತದೆ. ಇದು ಗ್ರಾಮೀಣ ಭಾಗದ ಬಡ ಕುಟುಂಬಗಳ ಸದಸ್ಯರಿಗೆ ವೈಯಕ್ತಿಕವಾಗಿ ನೆರವಾಗಲಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದು ಲೋಕಸಭಾ ಚುನಾವಣೆಯಲ್ಲಿ ಲಾಭವಾಗಿ ಪರಿಣಮಿಸುತ್ತದೆನ್ನುವುದೂ ಮೋದಿ ಸರಕಾರದ ಲೆಕ್ಕಾಚಾರವಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.