![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 7, 2020, 12:34 PM IST
ಭುವನೇಶ್ವರ್: ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಕರಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಡಿಸೆಂಬರ್ 31ರವರೆಗೆ ಶಾಲಾ ಆರಂಭ ಮುಂದೂಡಲಾಗಿದೆ ಎಂದು ಶನಿವಾರ(ನವೆಂಬರ್ 07, 2020) ಘೋಷಿಸಲಾಗಿದೆ. ಎಂದಿನಂತೆ ಆನ್ ಲೈನ್ ತರಗತಿ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಪರೀಕ್ಷೆ ನಡೆಸಲು, ಮೌಲ್ಯಮಾಪನ ಮತ್ತು ಆಡಳಿತಾತ್ಮಕ ಚಟುವಟಿಕೆ ನಡೆಸಲು ಅವಕಾಶ ಇದೆ ಎಂದು ಒಡಿಶಾ ಸರ್ಕಾರ ಬಿಡುಗಡೆ ಮಾಡಿರುವ ಆದೇಶದಲ್ಲಿ ಹೇಳಿದೆ. ಸೋಂಕು ಪೀಡಿತ ವಲಯ ಹೊರತುಪಡಿಸಿ ಇತರೆಡೆ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದೆ.
ಕೋವಿಡ್ 19 ಸೋಂಕಿನ ಎರಡನೇ ಹಂತದ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳನ್ನು ಡಿಸೆಂಬರ್ 31ರವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ಒಡಿಶಾ ಸರ್ಕಾರ ವಿವರಿಸಿದೆ. ನವೆಂಬರ್ ನಲ್ಲಿ 9ರಿಂದ 12ನೇ ತರಗತಿವರೆಗೆ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳನ್ನು ಡಿಸೆಂಬರ್ 31ರವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಒಡಿಶಾ ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಬೈಡೆನ್ ಅಮೆರಿಕ ಅಧ್ಯಕ್ಷರಾದರೆ ಪಾಕಿಸ್ತಾನಕ್ಕೆ ಯಾಕೆ ಹೆಚ್ಚು ಖುಷಿ?ಭಾರತದ ಮೇಲೇನು ಪರಿಣಾಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.