
ಲೋಕ ಚುನಾವಣೆಯಲ್ಲಿ ಪುರುಷರಿಗಿಂತ ಸ್ತ್ರೀಯರೇ ಹೆಚ್ಚು ಮತದಾನ: ಆಯೋಗ
ಮಹಿಳೆಯರದ್ದು ಶೇ.65.78, ಪುರುಷರ ಮತ ಶೇ.65.55
Team Udayavani, Dec 27, 2024, 7:20 AM IST

ನವದೆಹಲಿ: ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿದ್ದಾರೆ. ಒಟ್ಟು ಮತದಾನದ ಪೈಕಿ ಶೇ.65.78ರಷ್ಟು ಮಹಿಳೆಯರು ಹಾಗೂ ಶೇ.65.55ರಷ್ಟು ಪುರುಷರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.
ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ಆಯೋಗ ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಷ್ಟೊಂದು ವಿವರವಾದ ದತ್ತಾಂಶಗಳ ಮಾಹಿತಿಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದೆ. ಸ್ವಯಂ ಆಗಿ ನೀಡಲಾಗಿರುವ ಈ ಮಾಹಿತಿಯು ಸಾರ್ವಜನಿಕರಲ್ಲಿ ಚುನಾವಣಾ ಪ್ರಕ್ರಿಯೆ ಮೇಲೆ ಇನ್ನೂ ಹೆಚ್ಚಿನ ವಿಶ್ವಾಸವನ್ನು ವೃದ್ಧಿಸಲಿದೆ ಎಂದು ಆಯೋಗವು ಹೇಳಿದೆ.
ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 111 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, ಉತ್ತರಪ್ರದೇಶದಲ್ಲಿ 80, ತಮಿಳುನಾಡಲ್ಲಿ 70 ಅಭ್ಯರ್ಥಿಗಳಿದ್ದರು. ಆದರೆ, 543 ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಲ್ಲಿ ಒಬ್ಬೇ ಒಬ್ಬ ಮಹಿಳಾ ಅಭ್ಯರ್ಥಿಗಳಿರಲಿಲ್ಲ ಎಂದು ಆಯೋಗವು ಹೇಳಿದೆ. ಭಾರತೀಯ ಸಾಗರೋತ್ತರ ಮತದಾರರ ಪಟ್ಟಿಯಲ್ಲಿ 1.19 ಲಕ್ಷ ಜನರು ನೋಂದಣಿ ಮಾಡಿದ್ದರು ಎಂದು ಆಯೋಗವು ತಿಳಿಸಿದೆ. ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶಗಳ ಜತೆಗೆ ಲೋಕಸಭೆಗೆ ಚುನಾವಣೆ ನಡೆದಿತ್ತು.
ಶೇ.86 ಮಂದಿಗೆ ಠೇವಣಿ ನಷ್ಟ: ಆಯೋಗ
ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಶೇ.86 ಮಂದಿ ಠೇವಣಿ ಕಳೆದುಕೊಂಡಿದ್ದಾರೆ ಎಂದು ಹೇಳಿದೆ. ಒಟ್ಟು 12000 ಮಂದಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆ ಬಳಿಕ 8360 ಮಂದಿ ಕಣದಲ್ಲಿ ಉಳಿದುಕೊಂಡಿದ್ದರು. 7190 ಮಂದಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಶೇಕಡಾವಾರು ಲೆಕ್ಕಾಚಾರ ಗಮನಿಸಿದರೆ ಶೇ.86 ಎಂದು ಆಯೋಗ ಹೇಳಿದೆ. ಈ ಪೈಕಿ 584 ಮಂದಿ ಅಭ್ಯರ್ಥಿಗಳು 6 ಮಾನ್ಯತೆ ಪಡೆದ ಪಕ್ಷದಿಂದಲೇ ಆಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ 6923 ಮಂದಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.