ಪಾತಕಿಗಳು ಪಾತಾಳದಲ್ಲಿದ್ದರೂ ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ ಗುಡುಗು

2008ರ ಅಹ್ಮದಾಬಾದ್‌ ಸ್ಫೋಟ ಪ್ರಕರಣದ ಬಗ್ಗೆ ಮಾತು ; ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರ

Team Udayavani, Feb 21, 2022, 7:55 AM IST

ಪಾತಕಿಗಳು ಪಾತಾಳದಲ್ಲಿದ್ದರೂ ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ ಗುಡುಗು

ಹರ್ದೋಯಿ (ಉತ್ತರ ಪ್ರದೇಶ): “ಅಹ್ಮದಾಬಾದ್‌ ಸ್ಫೋಟಕ್ಕೆ ಕಾರಣರಾದ ಇಂಡಿಯನ್‌ ಮುಜಾಹಿದ್ದೀನ್‌ನ ಪಾತಕಿಗಳು ಪಾತಾಳದಲ್ಲೇ ಅಡಗಿದ್ದರೂ ನಾನು ಬಿಡುತ್ತಿರಲಿಲ್ಲ” – ಇದು ಪ್ರಧಾನಿ ನರೇಂದ್ರ ಮೋದಿಯವರ ಗುಡುಗು.

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಭಾನುವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, “2008ರಲ್ಲಿ ಈ ಘಟನೆ ನಡೆದಾಗ ಅಹ್ಮದಾಬಾದ್‌ನ ಮಣ್ಣು ಜನರ ರಕ್ತದಲ್ಲಿ ತೊಯ್ದು ಹೋಗಿತ್ತು. ಆಗ ನಾನು ಗುಜರಾತ್‌ ಮುಖ್ಯಮಂತ್ರಿಯಾಗಿದ್ದೆ. ಸ್ಫೋಟ ನಡೆದಾಗ ರಕ್ತಸಿಕ್ತ ಮಣ್ಣನ್ನು ಕೈಯ್ಯಲ್ಲಿ ಹಿಡಿದ ನಾನು, ಈ ದೃಷ್ಕೃತ್ಯದ ಹಿಂದಿನ ಪಾತಕಿಗಳು ಪಾತಾಳದಲ್ಲೇ ಅಡಗಿದ್ದರೂ ನಾನು ಅವರನ್ನು ಬಿಡದೆ ಶಿಕ್ಷಿಸುತ್ತೇನೆಂದು ಶಪಥ ಮಾಡಿದೆ.

ಅಹ್ಮದಾಬಾದ್‌ ಕೋರ್ಟ್‌ನಲ್ಲಿ ಈ ಪ್ರಕರಣ ವಿಚಾರಣೆಯಲ್ಲಿದ್ದಿದ್ದರಿಂದ ಈವರೆಗೆ ನಾನು ಮಾತನಾಡಿರಲಿಲ್ಲ” ಎಂದು ಹೇಳಿದರು.

ಇದೇ ವೇಳೆ, ಸಮಾಜವಾದಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, “”2007ರಲ್ಲಿ ಅಯೋಧ್ಯೆ ಹಾಗೂ ಲಕ್ನೋದಲ್ಲಿ ಸ್ಫೋಟಗಳಾದವು. 2013ರಲ್ಲಿ ಉತ್ತರ ಪ್ರದೇಶ ಆಳುತ್ತಿದ್ದ ಸಮಾಜವಾದಿ ಪಕ್ಷ ಆ ಸ್ಫೋಟಗಳ ಆರೋಪಿಯಾಗಿª ತಾರೀಖ್‌ ಕಜ್ಮಿ ವಿರುದ್ಧ ಪ್ರಕರಣಗಳನ್ನು ಹಿಂಪಡೆಯಿತು. ಆದರೆ, ನ್ಯಾಯಾಲಯ ಅದಕ್ಕೆ ಅವಕಾಶ ಕೊಡದೆ ಆತನಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತು” ಎಂದರು.

“ಅಷ್ಟೇ ಅಲ್ಲ, ಉತ್ತರ ಪ್ರದೇಶದಲ್ಲಿ ನಡೆದಿದ್ದ ಉಗ್ರರ ದಾಳಿಗಳಿಗೆ ಸಂಬಂಧಿಸಿದ 14 ಪ್ರಕರಣಗಳನ್ನು ಸಮಾಜವಾದಿ ಪಕ್ಷ ಹಿಂಪಡೆದಿತ್ತು. ಆ ಮೂಲಕ ಆ ಪ್ರಕರಣಗಳಲ್ಲಿನ ಆರೋಪಿಗಳು ವಿಚಾರಣೆಗೊಳಪಡಲು ಆ ಪಕ್ಷ ಅವಕಾಶವನ್ನೇ ನೀಡಲಿಲ್ಲ. ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಆ ಪಕ್ಷ ಉಗ್ರರಿಗೆ ರಿಟರ್ನ್ ಗಿಫ್ಟ್ ನೀಡಿದೆ” ಎಂದು ಆರೋಪಿಸಿದರು.

ಇಡೀ ಪ್ರಕರಣದ ಹಿಂದಿನ ಸತ್ಯಾಸತ್ಯಗಳನ್ನು ಮಾಧ್ಯಮಗಳು ಬಯಲು ಮಾಡಬೇಕು ಎಂದು ಅವರು ಕರೆ ನೀಡಿದರು.

“ಅಂದು ಕಿರುಕುಳ, ಇಂದು ಬೇಡಿಕೆ’
ಇದೇ ವೇಳೆ ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ ಮೋದಿ, ಈ ಹಿಂದೆ ಇಡೀ ಪಕ್ಷವನ್ನು ತಮ್ಮ ಸ್ವಾಧೀನಕ್ಕೆ ಪಡೆಯಲು ಅಖೀಲೇಶ್‌ ಅವರು ತಮ್ಮ ತಂದೆಯವರಿಗೆ ಮಾನಸಿಕ ಕಿರುಕುಳ ಕೊಟ್ಟಿದ್ದರು. ಈಗ, ತಮ್ಮ ಸ್ಥಾನವನ್ನು ಉಳಿಸುವಂತೆ ತಂದೆಯ ಬೆನ್ನುಬಿದ್ದಿದ್ದಾರೆ ಎಂದರು. ಯಾವ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆ ಎಂದೆಣಿಸಿ, ಆ ಕ್ಷೇತ್ರದಿಂದ ಅಖೀಲೇಶ್‌ ಚುನಾವಣೆಗೆ ನಿಂತಿದ್ದಾರೋ ಈಗ ಆ ಕ್ಷೇತ್ರವೇ ಅವರ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೋದಿ ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.