ಯು.ಪಿ ಸರ್ಕಾರ ಮದರಸಾಗಳನ್ನು ಸರ್ವೆ ಮಾಡಬಹುದು..: ಜಮೀಯತ್ ಉಲಮಾ-ಎ-ಹಿಂದ್ ಅಧ್ಯಕ್ಷ


Team Udayavani, Sep 18, 2022, 5:53 PM IST

UP government can survey unrecognised madrassas

ಸಹರಾನ್ಪುರ: ಉತ್ತರ ಪ್ರದೇಶದ ದಾರುಲ್ ಉಲೂಮ್, ದಿಯೋಬಂದ್‌ ನಲ್ಲಿ ಮದರಸಾಗಳ ಸಮಾವೇಶ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಮಾನ್ಯತೆ ಪಡೆಯದ ಮದರಸಾಗಳ ಸಮೀಕ್ಷೆ ನಡೆಸುವ ವಿಚಾರದಲ್ಲಿ ಮದರಸಾಗಳಿಂದ ಯಾವುದೇ ಆಕ್ಷೇಪವಿಲ್ಲ ಎಂದು ಜಮೀಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಭಾನುವಾರ ಹೇಳಿದ್ದಾರೆ.

ಮದರಸಾಗಳ ಸರ್ವೆ ಮಾಡಲು ನಮ್ಮಿಂದ ಯಾವುದೇ ಅಭ್ಯಂತರವಿಲ್ಲ. ನಾವು ಉಲೇಮಾಗಳಿಗೆ (ಮದರಸಾ ಉಸ್ತುವಾರಿ) ಸರಿಯಾದ ಮಾಹಿತಿ ನೀಡಲು ಸೂಚಿಸಿದ್ದೇವೆ. ಜನರು ಈ ಸರ್ವೆಗೆ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.

ಈ ಸರ್ವೆಯ ಬಗ್ಗೆ ಮುಸ್ಲಿಂ ಸಮುದಾಯ ಯಾವುದೇ ಕೋಪವನ್ನು ಹೊಂದಿಲ್ಲ. ನಾವು ಮುಸ್ಲಿಮರಿಂದ ದೇಣಿಗೆ ಸಂಗ್ರಹಿಸಿ ಮದರಸಾಗಳನ್ನು ನಡೆಸುತ್ತೇವೆ. ಯಾವುದೇ ಮದರಸಾಗಳಲ್ಲಿ ಯಾವುದಾದರೂ ಮಗುವಿಗೆ ಹಿಂಸೆ ನೀಡಲಾಗುತ್ತಿದೆಯೇ ಎಂದು ಯಾರು ಬೇಕಾದರೂ ಬಂದು ನೋಡಬಹುದು. ನಿಮಗೆ ಮದರಸಾಗಳಲ್ಲಿ ಏನಾದರೂ ತಪ್ಪು ಕಂಡರೆ ನೀವು ಕೂಡಲೇ ಮುಚ್ಚಬಹುದು ಎಂದು ಮೌಲಾನಾ ಅರ್ಷದ್ ಮದನಿ ಹೇಳಿದ್ದಾರೆ.

ಇದನ್ನೂ ಓದಿ:ಟೀಚರ್‌ ನನ್ನ ಚಿತ್ರ ಬಿಡಿಸಿ ಎಂದರೆ ಈ ಮಕ್ಕಳು ಯಾರ ಚಿತ್ರ ಬಿಡಿಸಿದ್ದಾರೆ ನೋಡಿ: ಫೋಟೋ ವೈರಲ್

ಒಂದು ವೇಳೆ ಮದರಸಾ ಸರ್ಕಾರಿ ಜಾಗದಲ್ಲಿದ್ದರೆ ಅದನ್ನು ಕೆಡವಲು ಸರ್ಕಾರ ಎಲ್ಲಾ ಹಕ್ಕು ಹೊಂದಿದೆ. ಆದರೆ ಮದರಸಾ ಅದರದೇ ಜಾಗದಲ್ಲಿದ್ದರೆ ನಾವು ಅದರ ವಿರುದ್ಧವಿದ್ದೇವೆ ಎಂದಿದ್ದಾರೆ.

ಮದರಸಾಗಳು ತಮ್ಮ ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಮತ್ತು ಕಾಲಕಾಲಕ್ಕೆ ಲೆಕ್ಕಪರಿಶೋಧನೆ ನಡೆಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು. ದಿನನಿತ್ಯದ ಧಾರ್ಮಿಕ ಕಾರ್ಯಗಳಿಗೆ ಮದರಸಾಗಳು ಸರ್ಕಾರದಿಂದ ಸಹಾಯ ಪಡೆಯುವುದಿಲ್ಲ ಎಂದ ಮದನಿ, ಶಾಲಾ-ಕಾಲೇಜುಗಳನ್ನು ನಿರ್ಮಿಸಲು ಸರ್ಕಾರ ಸಹಾಯ ಮಾಡಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.