Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Team Udayavani, Oct 6, 2024, 4:10 PM IST
ಪಾಟ್ನಾ: ಪ್ರಿಯಕರನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎಸೆದಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ನಡೆದಿರುವುದು ವರದಿಯಾಗಿದೆ.
ವರ್ಷಾ ಹಾಗೂ ವಿವೇಕ್ ಕಳೆದ 12 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ವರ್ಷಾಳಿಗೆ ಮದುವೆ ಆಗಿದ್ದರೂ ಆಕೆ ವಿವೇಕ್ನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ.
ಭಾನುವಾರ (ಅ.6ರಂದು) ಮುಂಜಾನೆ ಇಬ್ಬರು ಸ್ಥಳೀಯ ರೆಸ್ಟೋರೆಂಟ್ ವೊಂದರಲ್ಲಿ ಭೇಟಿ ಆಗಿದ್ದಾರೆ. ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ವರ್ಷಾ ಇದ್ದಕ್ಕಿದ್ದಂತೆ ತನ್ನ ಬ್ಯಾಗ್ನಿಂದ ಆ್ಯಸಿಡ್ ಬಾಟಲಿಯನ್ನು ತೆಗೆದು ವಿವೇಕ್ ಮೇಲೆ ಎಸೆದಿದ್ದಾಳೆ. ಆ್ಯಸಿಡ್ ಎಸೆದ ಕಾರಣ ವಿವೇಕ್ ಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆತನ ಅಲ್ಲಿಂದ ಓಡಿ ಹೋಗಿದ್ದಾನೆ. ಇನ್ನು ವರ್ಷಾ ಮತ್ತು ರೆಸ್ಟೋರೆಂಟ್ ಉದ್ಯೋಗಿಗೂ ಸುಟ್ಟ ಗಾಯಗಳಾಗಿವೆ.
ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವರ್ಷಾಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈತ ನನಗೆ ಕಳೆದ 12 ವರ್ಷಗಳಿಂದ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾನೆ ಇದಕ್ಕಾಗಿ ನಾನು ಈ ರೀತಿ ಮಾಡಿದ್ದೇನೆ ಎಂದು ವರ್ಷಾ ಹೇಳಿದ್ದಾಳೆ.
ಆದರೆ ಯಾವ ರೀತಿಯ ಬ್ಲ್ಯಾಕ್ ಮೇಲ್ ಎನ್ನುವುದು ತನಿಖೆಯ ಬಳಿಕವಷ್ಟೇ ಗೊತ್ತಾಗಬೇಕಿದೆ.
“ವರ್ಷಾ ತನ್ನ ಸ್ನೇಹಿತ ವಿವೇಕ್ ಮೇಲೆ ಆ್ಯಸಿಡ್ ಎರಚಿದ್ದಾಳೆ. ಆತ ಅಲ್ಲಿಂದ ಓಡಿ ಹೋಗಿದ್ದಾನೆ. ಆ್ಯಸಿಡ್ ವರ್ಷಾ ಮೇಲೂ ಬಿದ್ದಿದೆ. ಅವಳು ಚಿಕಿತ್ಸೆ ಪಡೆಯುತ್ತಿದ್ದಾಳೆ. ನಮಗೆ ಇನ್ನೂ ಅಧಿಕೃತ ದೂರು ಬಂದಿಲ್ಲ, ಆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವರುಣ್ ಕುಮಾರ್ ಮಿಶ್ರಾ ಹೇಳಿದ್ದಾರೆ.
ಇಬ್ಬರು ಒಪ್ಪಿಗೆಯ ಮೇರೆಗೆ ತಮ್ಮ ಸಂಬಂಧವನ್ನು ಮುಂದುವರೆಸುತ್ತಿದ್ದರು. ಇದೊಂದು ಗಂಭೀರವಾದ ಪ್ರಕರಣವಾಗಿದೆ. ಎರಡೂ ಕಡೆಯವರನ್ನು ನಾವು ಕರೆದು ವಿಚಾರಣೆ ನಡೆಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ರೆಸ್ಟೋರೆಂಟ್ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ವಿವೇಕ್ ಅವರ ಬೈಕ್ ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.