![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Sep 21, 2024, 6:41 AM IST
ಡೆಹ್ರಾಡೂನ್: ಪ್ರತಿಭಟನೆ, ಗಲಭೆಯ ವೇಳೆ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾದರೆ ಹಾನಿ ಮಾಡಿದವರಿಂದಲೇ ಸಂಪೂರ್ಣ ಹಣ ವಸೂಲಿ ಮಾಡುವ ಕಾನೂನನ್ನು ಉತ್ತರಾಖಂಡದಲ್ಲಿ ಜಾರಿ ಮಾಡಲಾಗಿದೆ. ಉತ್ತರಾಖಂಡ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ನಷ್ಟ ವಸೂಲಿ ಮಸೂದೆಯನ್ನು ಕಳೆದ ತಿಂಗಳು ರಾಜ್ಯ ವಿಧಾನಸಭೆ ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರ ಸಹಿ ಬೀಳುವುದರೊಂದಿಗೆ ಕಾನೂನು ಜಾರಿಯಾಗಿದೆ.
ಪ್ರತಿಭಟನೆ, ಧರಣಿ ನಡೆಸುವ ಸಮಯದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಅದಕ್ಕೆ ಹಾನಿ ಮಾಡಿದವರನ್ನೇ ಅಂದರೆ ಪ್ರತಿಭಟನೆಗೆ ಕರೆ ನೀಡಿದವರನ್ನೇ ಹೊಣೆ ಮಾಡಲಾಗುತ್ತದೆ. ಇದಲ್ಲದೆ ಅವರಿಗೆ 8 ಲಕ್ಷ ರೂ. ದಂಡವನ್ನೂ ವಿಧಿಸಲಾಗುತ್ತದೆ. ಜತೆಗೆ ಗಲಭೆ ನಿಯಂತ್ರಣಕ್ಕೆಂದು ನಿಯೋಜನೆಯಾಗುವ ಸಿಬಂದಿಯ ಖರ್ಚು ವೆಚ್ಚದ ಮೊತ್ತವನ್ನೂ ಅವರಿಂದಲೇ ವಸೂಲಿ ಮಾಡಲಾಗುತ್ತದೆ. “ಇದು ದೇಶದ ಅತ್ಯಂತ ಕಠಿನ ಗಲಭೆ ನಿಗ್ರಹ ಕಾನೂನು’ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.