![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 20, 2023, 6:12 AM IST
ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು 17 ಮಂದಿ ಅಸುನೀಗಿದ್ದಾರೆ. 23 ಮಂದಿ ಗಾಯಗೊಂಡಿದ್ದಾರೆ. ಅವರನ್ನು ರಿಷಿಕೇಶದಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಲಕಾನಂದ ನದಿ ತೀರದಲ್ಲಿ “ನಮಾಮಿ ಗಂಗೆ’ ಯೋಜನೆಗಾಗಿ ಅವರೆಲ್ಲ ಕೆಲಸ ಮಾಡುತ್ತಿದ್ದರು. ಅಸುನೀಗಿದವರಲ್ಲಿ ಮೂವರು ಹೋಮ್ ಗಾರ್ಡ್ಗಳು, ಒಬ್ಬ ಪೊಲೀಸ್ ಸಿಬಂದಿ ಸೇರಿದ್ದಾರೆ. ಸ್ಫೋಟಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆದೇಶಿಸಿದ್ದಾರೆ. ಸ್ಫೋಟದ ತೀವ್ರತೆಯಿಂದಾಗಿ ಆರು ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಜಿಪಿ ವಿ.ಮುರುಗೇಶನ್ ತಿಳಿಸಿದ್ದಾರೆ.
ಸೇನಾ ಟೆಂಟ್ನಲ್ಲಿ ಬೆಂಕಿ ಅವಘಡ: ಅಧಿಕಾರಿ ಸಾವು
ಸಿಯಾಚಿನ್ ಗ್ಲೆಷಿಯರ್ನಲ್ಲಿರುವ ಸೇನಾ ಟೆಂಟ್ನಲ್ಲಿ ಬುಧವಾರ ಬೆಂಕಿ ಅನಾಹುತ ಸಂಭವಿಸಿದೆ. ಪರಿಣಾಮ ಸೇನೆಯ ಅಧಿಕಾರಿಯೊಬ್ಬರು ಮೃತಪಟ್ಟು, 6 ಯೋಧರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಲವು ಟೆಂಟ್ಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ನೂಟ್ನಿಂದ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.