Uttarakhand: ಪತಿಯನ್ನು ಹೆದರಿಸುವ ನಿಟ್ಟಿನಲ್ಲಿ ಮಗನಿಗೆ ಥಳಿಸಿ ವಿಡಿಯೋ ಮಾಡಿದ ಪತ್ನಿ.!
Team Udayavani, Jul 18, 2024, 4:03 PM IST
ಡೆಹ್ರಾಡೂನ್: ಕೌಟುಂಬಿಕ ಕಲಹದಿಂದ ತನ್ನ ಮಗನನ್ನೇ ಮಹಿಳೆಯೊಬ್ಬರು ಥಳಿಸಿರುವ ವಿಡಿಯೋ ಮಾಡಿ ಅದನ್ನು ಪತಿಗೆ ಕಳಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿರುವುದು ವರದಿಯಾಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಹರಿದ್ವಾರ ಪೊಲೀಸರು ಇದನ್ನು ಪರಿಶೀಲಿಸಿದ್ದು, ಇದು ಎರಡು ತಿಂಗಳ ಹಿಂದಿನ ವಿಡಿಯೋ ಎಂದು ಹೇಳಿದ್ದಾರೆ.
ಮಹಿಳೆಯ ಪತಿ ಉತ್ತರ ಪ್ರದೇಶದಲ್ಲಿ ನೆಲೆಸಿದ್ದಾನೆ. ಈತ ಮದ್ಯವ್ಯಸನಿಯಾಗಿದ್ದು, ಮನೆ ಖರ್ಚಿಗೆ ಒಂದು ರೂಪಾಯಿಯನ್ನು ನೀಡುತ್ತಿರಲಿಲ್ಲ. ಇದರಿಂದ ಬೇಸತ್ತು ಹೋದ ಮಹಿಳೆ ತನ್ನ ಪತಿಯನ್ನು ಹೆದರಿಸುವ ನಿಟ್ಟಿನಲ್ಲಿ 11 ವರ್ಷದ ಮಗನನ್ನು ಥಳಿಸಿದ್ದಾಳೆ.
ಥಳಿಸುತ್ತಿರುವ ವಿಡಿಯೋವನ್ನು ಹಿರಿಯ ಮಗ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೋವನ್ನು ಮಹಿಳೆ ಪತಿಗೆ ಕಳುಹಿಸಿದ್ದಾಳೆ. ವಿಡಿಯೋ ಸಿಕ್ಕ ಬಳಿಕ ಪತಿ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯೂಸಿ) ಮಾಹಿತಿ ನೀಡಿ ,ನಂತರ ಮಹಿಳೆಯನ್ನು ವಿಚಾರಣೆಗೆ ಕರೆಯಲಾಗಿದೆ. ಆಕೆಯನ್ನು ಹಲವು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 10 ವರ್ಷದಿಂದ ಪತಿಯ ಕುಡಿತದ ಚಟದಿಂದ ಸಂಸಾರದಲ್ಲಿ ಅನೇಕ ಬಾರಿ ಕಲಹ ಉಂಟಾಗಿದೆ. ಕೆಲವು ತಿಂಗಳುಗಳಿಂದ ಮನೆಗೆ ಬಾರದೆ ಉತ್ತರಪ್ರದೇಶದಲ್ಲಿ ಅಂಗಡಿಯೊಂದನ್ನು ನಿರ್ವಹಿಸುತ್ತಿದ್ದಾನೆ. ನಾನು ದೊಡ್ಡ ಮಗನ ಬಳಿ ಮತ್ತೊಂದು ಮಗುವಿಗೆ ಹೊಡೆಯುತ್ತಿರುವ ವಿಡಿಯೋ ಮಾಡಲು ಹೇಳಿ, ಪತಿಯನ್ನು ಹೆದರಿಸುವುದಕ್ಕಾಗಿ ವಿಡಿಯೋ ಕಳಿಸಿದೆ ಎಂದು ಪೊಲೀಸರ ಮುಂದೆ ಮಹಿಳೆ ಹೇಳಿದ್ದಾಳೆ.
ಪೊಲೀಸರು ಮಹಿಳೆ ಬಗ್ಗೆ ಅಕ್ಕಪಕ್ಕದವರ ಬಳಿ ವಿಚಾರಿಸಿದ್ದಾರೆ. ಆಗ ಮಹಿಳೆ ತನ್ನ ಮಕ್ಕಳ ಜೊತೆ ಒಳ್ಳೆಯ ರೀತಿಯಲ್ಲೇ ಇದ್ದಾರೆ ಎನ್ನುವುದು ಗೊತ್ತಾಗಿದೆ.
ಪತಿ ವಿರುದ್ಧ ಮಹಿಳೆ ಮಾಡಿರುವ ಆರೋಪದ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.