ವೈಕುಂಠ ದ್ವಾರ ದರ್ಶನಕ್ಕೆ ಟಿಟಿಡಿ ಸಿದ್ಧತೆ: ಭಕ್ತರಿಗೆ ತೊಂದರೆಯಾಗದಂತೆ ಹಲವು ಕ್ರಮ
ಜ.2ರಿಂದ 11ರ ವರೆಗೆ ಪ್ರತಿ ದಿನ 45 ಸಾವಿರ ಸ್ಲಾಟ್ ಬಿಡುಗಡೆ
Team Udayavani, Dec 29, 2022, 7:20 AM IST
ತಿರುಮಲ:ಮುಂದಿನ ತಿಂಗಳ 2ರಿಂದ 11ರ ವರೆಗೆ ತಿರುಮಲದಲ್ಲಿ ಇರುವ ಶ್ರೀ ವೆಂಕಟೇಶ್ವರ ದೇಗುಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ.
ಪ್ರತಿ ದಿನ 45 ಸಾವಿರ ಸ್ಲಾಟ್ಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನಮ್ಸ್ ಅಧ್ಯಕ್ಷ ವೈ.ವಿ.ಸುಬ್ಟಾ ರೆಡ್ಡಿ ಹೇಳಿದ್ದಾರೆ. ಇದಲ್ಲದೆ ಉಚಿತವಾಗಿ ಸರ್ವ ದರ್ಶನ ಟಿಕೆಟ್ಗಳನ್ನು ಜ.1ರರಿಂದ ತಿರುಪತಿಯಲ್ಲಿ ಇರುವ 9 ಕೇಂದ್ರಗಳಲ್ಲಿ ವಿತರಿಸಲಾಗುತ್ತದೆ.
ಪವಿತ್ರ ಕ್ಷೇತ್ರದಲ್ಲಿ ಇರುವ ಭೂದೇವಿ ಕಾಂಪ್ಲೆಕ್ಸ್, ಇಂದಿರಾ ಮೈದಾನ, ರಾಮಚಂದ್ರ ಪುಷ್ಕರಿಣಿ ಸೇರಿದಂತೆ ಹಲವು ಕೇಂದ್ರಗಳಲ್ಲಿ ಉಚಿತ ಟಿಕೆಟ್ ನೀಡಲು ವ್ಯವಸ್ಥೆ ಮಾಡಲಾಗಿದೆ.
ತೀರ್ಥಯಾತ್ರಿಗಳಿಗೆ ಸುಗಮವಾಗಿ ಆಹಾರ, ಪಾನೀಯ ವಿತರಿಸುವ ನಿಟ್ಟಿನಲ್ಲಿ ಟಿಟಿಡಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು ಸುಬ್ಬರಾವ್ ಹೇಳಿದ್ದಾರೆ.
ಮುಂಗಡ ಬುಕಿಂಗ್ ರದ್ದು:
ಹೊಸ ವರ್ಷ ದಿನ ಹಾಗೂ ವೈಕುಂಠ ಏಕಾದಶಿ ಪ್ರಯುಕ್ತ ಡಿ.29ರಿಂದ ಜ.3ರ ವರೆಗೆ ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸುವ ವ್ಯವಸ್ಥೆ ರದ್ದು ಮಾಡಲಾಗಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.