ಹಿರಿಯ ಪತ್ರಕರ್ತ ನಯ್ಯರ್‌ ನಿಧನ


Team Udayavani, Aug 24, 2018, 7:25 AM IST

kuldeep-24-8.jpg

ಹೊಸದಿಲ್ಲಿ: ಪತ್ರಿಕಾ ಸ್ವಾತಂತ್ರ್ಯ, ನಾಗರಿಕ ಸ್ವಾತಂತ್ರ್ಯಗಳಿಗಾಗಿ ಹೋರಾಡಿದ ಹಿರಿಯ ಪತ್ರಕರ್ತ ಕುಲದೀಪ್‌ ನಯ್ಯರ್‌ ಅವರು ಗುರುವಾರ ನಿಧನ ಹೊಂದಿದ್ದಾರೆ. 95 ವರ್ಷ ವಯಸ್ಸಿನ ಕುಲದೀಪ್‌ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದ ಕಾರಣ ಐದು ದಿನಗಳ ಹಿಂದೆ ದಿಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕುಲದೀಪ್‌ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಹಾಗೂ ಅಣ್ಣನನ್ನು ಅಗಲಿದ್ದಾರೆ. ಗುರುವಾರವೇ ಅವರ ಅಂತ್ಯಕ್ರಿಯೆ ನಡೆಯಿತು. 1923ರಂದು ಈಗಿನ ಪಾಕಿಸ್ಥಾನದ ಸಿಯಲ್‌ಕೋಟ್‌ನಲ್ಲಿ ಜನಿಸಿದ ನಯ್ಯರ್‌, ಉರ್ದು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪ್ರವೇಶಿಸಿದ್ದರು. ಇಂಡಿಯನ್‌ ಎಕ್ಸ್‌ಪ್ರೆಸ್‌ ಹಾಗೂ ದಿ ಸ್ಟೇಟ್ಸ್‌ಮನ್‌ ಸಹಿತ ಅನೇಕ ಪತ್ರಿಕೆಗಳಲ್ಲಿ ಇವರು ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ತುರ್ತುಪರಿಸ್ಥಿತಿಯ ವೇಳೆ ಸೆರೆವಾಸವನ್ನೂ ಅನುಭವಿಸಿದ್ದರು. 50ಕ್ಕೂ ಹೆಚ್ಚು ಪತ್ರಿಕೆಗಳಿಗೆ ಅವರು ಅಂಕಣ ಹಾಗೂ ಲೇಖನಗಳನ್ನು ಬರೆದಿದ್ದರು.

ಕುಲದೀಪ್‌ ಪತ್ರಕರ್ತರಾಗಷ್ಟೇ ಗುರುತಿಸಿ ಕೊಂಡಿರಲಿಲ್ಲ, ಮಾನವ ಹಕ್ಕುಗಳ ಪ್ರತಿಪಾದಕರಾಗಿದ್ದರು.1990ರಲ್ಲಿ ಬ್ರಿಟನ್‌ನಲ್ಲಿ ಭಾರತದ ಹೈ ಕಮಿಷನರ್‌ ಆಗಿಯೂ ಸೇವೆ ಸಲ್ಲಿಸಿದ್ದರು. 1997ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶಿತಗೊಂಡಿದ್ದರು. ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಶಾಂತಿ ಸ್ಥಾಪನೆಯಾಗಬೇಕೆಂಬ ಉತ್ಕಟ ಬಯಕೆಯನ್ನು ಕುಲದೀಪ್‌ ಹೊಂದಿದ್ದರು.

ತುರ್ತುಪರಿಸ್ಥಿತಿಯ ವೇಳೆ ಪ್ರಜಾತಂತ್ರಕ್ಕಾಗಿ ಗಟ್ಟಿಧ್ವನಿಯಲ್ಲಿ ಹೋರಾಡಿದ ವ್ಯಕ್ತಿ. ನೇರ ಮತ್ತು ನಿರ್ಭೀತಿಯಿಂದ ನಿಲುವು ಪ್ರಕಟಿಸುತ್ತಿದ್ದರು ಎಂದು ಕುಲದೀಪ್‌ ಅವರನ್ನು ಗುಣಗಾನ ಮಾಡಿರುವ ರಾಷ್ಟ್ರಪತಿ ಕೋವಿಂದ್‌ ಹಾಗೂ ಪ್ರಧಾನಿ ಮೋದಿ, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಪಾದಕರ ಗಿಲ್ಡ್‌ ಕೂಡಾ ಕುಲದೀಪ್‌ ನಿಧನಕ್ಕೆ ಸಂತಾಪ ಸೂಚಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.