ನಿರಾತಂಕವಾಗಿ ನಡೆದ ಸಮೀಕ್ಷೆ; ಇಂದು ಜ್ಞಾನವಾಪಿ 2ನೇ ಸುತ್ತಿನ ಸರ್ವೇ

ರವಿವಾರ ಬೆಳಗ್ಗೆಯಿಂದ 2ನೇ ಹಂತದ ಸರ್ವೇ ಆರಂಭ; ಮೇ 17ರೊಳಗೆ ಅಲಹಾಬಾದ್‌ ನ್ಯಾಯಾಲಯಕ್ಕೆ ವರದಿ

Team Udayavani, May 15, 2022, 7:30 AM IST

ನಿರಾತಂಕವಾಗಿ ನಡೆದ ಸಮೀಕ್ಷೆ; ಇಂದು ಜ್ಞಾನವಾಪಿ 2ನೇ ಸುತ್ತಿನ ಸರ್ವೇ

ವಾರಾಣಸಿ: ಭಾರೀ ವಿವಾದಕ್ಕೆ ಕಾರಣ ವಾಗಿರುವ ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಸಮೀಕ್ಷೆಯು ಶನಿವಾರ ಬಿಗಿಭದ್ರತೆಯೊಂದಿಗೆ ನಿರಾತಂಕವಾಗಿ ನೆರವೇರಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಸರ್ವೇ ಮಧ್ಯಾಹ್ನ 12ರವರೆಗೆ ಅಂದರೆ ಒಟ್ಟು 4 ಗಂಟೆಗಳ ಕಾಲ ನಡೆದಿದೆ. ಒಟ್ಟು ಶೇ. 40ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ.

ರವಿವಾರ ಮತ್ತೆ ಸಮೀಕ್ಷೆ ಕಾರ್ಯ ಮುಂದು ವರಿಯಲಿದೆ. ಮಂಗಳವಾರದೊಳಗೆ ವರದಿ ನೀಡುವಂತೆ ವಾರಾಣಸಿಯ ನ್ಯಾಯಾಲಯ ಸೂಚಿಸಿರುವ ಕಾರಣ, ಅಷ್ಟರಲ್ಲಿ ಸರ್ವೇ ಕಾರ್ಯ ಪೂರ್ಣಗೊ ಳ್ಳುವ ಸಾಧ್ಯತೆಯಿದೆ. “ಇಡೀ ಪ್ರಕ್ರಿಯೆಯು ಶಾಂತಿಯುತ ವಾಗಿ ನೆರವೇರಿದೆ. ಯಾರಿಂದಲೂ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ. ಎಲ್ಲವೂ ಸಹಜವಾ ಗಿತ್ತು, ಎಲ್ಲರೂ ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದು ವಾರಾಣಸಿ ಪೊಲೀಸ್‌ ಆಯುಕ್ತ ಎ.ಸತೀಶ್‌ ಗಣೇಶ್‌ ಹೇಳಿದ್ದಾರೆ.

ಶುಕ್ರವಾರವಷ್ಟೇ ವಿವಾದಕ್ಕೆ ಸಂಬಂಧಪಟ್ಟ ಎಲ್ಲರನ್ನೂ ಕರೆದು ಸಭೆ ನಡೆಸಿ, ಆಯುಕ್ತರಿಗೆ ಸಮೀಕ್ಷೆ ಕೈಗೊಳ್ಳಲು ಸಹಕಾರ ನೀಡುವಂತೆ ಮನವಿ ಮಾಡಲಾಗಿತ್ತು. ಅದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದರು. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಗೆಂದು 1500ಕ್ಕೂ ಅಧಿಕ ಪೊಲೀಸರು ಮತ್ತು ಪಿಎಸಿ ಯೋಧರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

“ಯಥಾಸ್ಥಿತಿ ಬದಲಿಸುವುದು ಸರಿಯಲ್ಲ’: ಧಾರ್ಮಿಕ ಕಾರ್ಯಕ್ರಮ ನಡೆಯುವ ಯಾವುದೇ ಪ್ರಾರ್ಥನಾ ಸ್ಥಳಗಳ ಯಥಾಸ್ಥಿತಿ ಯನ್ನು ಬದಲಾಯಿಸುವುದು ಸರಿಯಲ್ಲ. ಅವುಗಳು ಹೇಗಿದೆಯೋ, ಎಲ್ಲಿದೆಯೋ ಹಾಗೆಯೇ ಅಲ್ಲೇ ಇರಲು ಬಿಡಬೇಕು. ಇಲ್ಲ ದಿ ದ್ದರೆ ಅದು ದೊಡ್ಡ ಮಟ್ಟದ ಸಂಘ ರ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ. ಈ ರೀತಿಯ ಸಂಘರ್ಷಗಳನ್ನು ತಡೆಯಲೆಂದೇ ನರಸಿಂಹರಾವ್‌ ಸರಕಾರ “ಧಾರ್ಮಿಕ ಸ್ಥಳಗಳ ಕಾಯ್ದೆ’ಯನ್ನು ಜಾರಿ ಮಾಡಿದ್ದರು ಎಂದೂ ಅವರು ಸ್ಮರಿಸಿದ್ದಾರೆ.

ರಾಜಕೀಯ ಬೇಡ ಮೌರ್ಯ ಮನವಿ
ನ್ಯಾಯಾಲಯದ ಆಣತಿಯ ಮೇರೆಗೆ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಶಾಂತಿಗೆ ಯಾವುದೇ ಕಾರಣಕ್ಕೂ ಭಂಗವಾಗದಂತೆ ಬಿಗಿ ಬಂದೋಬರ್ಸ್‌ ಏರ್ಪಡಿಸಲಾಗಿದೆ. ಮತ್ತೂಂದೆಡೆ, ಮಥುರಾ ವಿಚಾರದಲ್ಲೂ ಇದೇ ರೀತಿ ನ್ಯಾಯಾಲಯದ ಆದೇಶಗಳನ್ನು ಪಾಲಿಸಲಾಗುತ್ತಿದೆ. ಹಾಗಿದ್ದರೂ, ವಿಪಕ್ಷಗಳು ಮಾತ್ರ ಈ ವಿಚಾರದಲ್ಲಿ ಅನವಶ್ಯಕವಾಗಿ ರಾಜಕೀಯ ಬೆರೆಸುತ್ತಿವೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಕಟುವಾಗಿ ಟೀಕಿಸಿರುವ ಅವರು, “”ಜ್ಞಾನವಾಪಿ ವಿಚಾರದಲ್ಲಿ ಹಾಗೂ ಶ್ರೀ ಕೃಷ್ಣ ಜನ್ಮಭೂಮಿ ವಿಚಾರದಲ್ಲಿ ವಿಪಕ್ಷಗಳು ನಡೆಸುವ ಸಾಂಪ್ರದಾಯಿಕ ರಾಜಕಾರಣವನ್ನು ದಯವಿಟ್ಟು ನಿಲ್ಲಿಸಿ. ಇಂಥ ಧಾರ್ಮಿಕ ವಿವಾದಗಳು ಎಲ್ಲೇ ನಡೆಯಲಿ ಕೋರ್ಟ್‌ ಆದೇಶ ಬರುವವರೆಗೆ ಕಾಯಬೇಕು. ಹಾಗೊಮ್ಮೆ ಕೋರ್ಟ್‌ ಆದೇಶ ಬಂದಾಗ ಅದನ್ನು ಎಲ್ಲರೂ ಪಾಲಿಸಬೇಕು” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.