Viral Video: ಹೆಚ್ಚುವರಿ ಹಣ ನೀಡದ ಗ್ರಾಹಕನಿಗೆ ಥಳಿಸಿದ ಆಟೋ ರಿಕ್ಷ ಚಾಲಕರು; ಓರ್ವನ ಬಂಧನ
Team Udayavani, Aug 12, 2024, 12:52 PM IST
ಮುಂಬೈ: ಹೆಚ್ಚುವರಿ ಹಣ ನೀಡದ ಕಾರಣಕ್ಕೆ ಪ್ರಯಾಣಿನೊಬ್ಬನಿಗೆ ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮಂಖುರ್ದ್ ರೈಲ್ವೆ ಠಾಣೆಯ ಬಳಿ ಈ ಘಟನೆ ನಡೆದಿತ್ತು.
ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆರೋಪಿ ಅಖೀಲ್ ಯೂನಸ್ ಶೇಖ್ ಎಂಬಾತನನ್ನು ಬಂಧಿಸಲಾಗಿದೆ. ಹೆಚ್ಚುವರಿ ಶುಲ್ಕವನ್ನು ನೀಡಲು ನಿರಾಕರಿಸಿದ ನಂತರ 21 ವರ್ಷದ ಸಂತ್ರಸ್ತ ಸೊಹೈಲ್ ಅನ್ಸಾರಿ ಮೇಲೆ ಆಟೋರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.
ಮುಂಬೈ ಪೊಲೀಸರು ಬಂಧನದ ಬಗ್ಗೆ ಎಕ್ಸ್ನಲ್ಲಿ (ಟ್ವಿಟರ್) ಘೋಷಣೆ ಮಾಹಿತಿ ನೀಡಿದ್ದಾರೆ.
“ಹೆಚ್ಚುವರಿ ದರವನ್ನು ಪಾವತಿಸುವ ವಿವಾದದಲ್ಲಿ ಆಟೋ-ರಿಕ್ಷಾ ಚಾಲಕರು ಪ್ರಯಾಣಿಕರೊಬ್ಬರ ಮೇಲೆ ಮಂಖುರ್ದ್ ರೈಲ್ವೆ ನಿಲ್ದಾಣದ ಬಳಿ ಹಲ್ಲೆ ನಡೆಸಿದ ಘಟನೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯೊಬ್ಬನ ಬಂಧನವಾಗಿದೆ. ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಪೋಸ್ಟ್ ತಿಳಿಸಿದೆ.
🧵 Serious Content! Warning ⚠️ Alert
Mankhurd Railway Station; Auto Stand Conflicts arise on road
Attn : @MTPHereToHelp @MumbaiPolice
❗ @ANI @PTI_News @DGPMaharashtra @RPFCR @RailMinIndia @EasternRailway pic.twitter.com/S7FFaICnaH
— Govandi Citizens Welfare Forum (@GovandiCell) August 10, 2024
ಮೂವರು ಆರೋಪಿಗಳು ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು, ಅವರಲ್ಲಿ ಒಬ್ಬ ಬೆಲ್ಟ್ ಬಳಸಿ ಆತನಿಗೆ ಹೊಡೆದಿದ್ದಾರೆ. ಅನ್ಸಾರಿ ಅವರ ಎದೆ ಮತ್ತು ತಲೆಯ ಮೇಲೆ ಸೊಂಟದ ಬೆಲ್ಟ್ ನಿಂದ ಪದೇ ಪದೇ ಹೊಡೆದು ಥಳಿಸಲಾಗಿದೆ. ಆರೋಪಿಗಳು ಅನ್ಸಾರಿಗೆ ಘಟನೆಯನ್ನು ಪೊಲೀಸರಿಗೆ ತಿಳಿಸದಂತೆ ಬೆದರಿಕೆ ಹಾಕಿದ್ದರು, ಆದರೆ ಅನ್ಸಾರಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.