ಸಂಜ್ಞಾ ಭಾಷೆ ಕಲಿಕೆ ವಿಷಯ


Team Udayavani, Jul 30, 2021, 6:52 AM IST

ಸಂಜ್ಞಾ ಭಾಷೆ ಕಲಿಕೆ ವಿಷಯ

ಹೊಸದಿಲ್ಲಿ: ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಹೊಸ ದಿಶೆಯತ್ತ ಕೊಂಡೊಯ್ಯ ಲಿರುವ 2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಮೂರು ಹೊಸ ವಿಷಯಗಳನ್ನು ಸೇರ್ಪಡೆ ಗೊಳಿ ಸಿರುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಟಗೊಂಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶ ವನ್ನು ಉದ್ದೇಶಿಸಿ ಮಾತನಾಡಿದ ಅವರು, ನೀತಿಯಲ್ಲಿ ಭಾರತೀಯ ಸಂಜ್ಞಾ ಭಾಷೆ (ಐಎಸ್‌ಎಲ್‌)ಯ ಅಧ್ಯಯನ, ಕೃತಕ ಬುದ್ಧಿಮತ್ತೆ (ಎ.ಐ.) ಅಧ್ಯಯನ ಮತ್ತು ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್‌ (ಎಬಿಸಿ) ಎಂಬ ವಿಷಯಗಳನ್ನು ಸೇರಿಸ ಲಾಗಿದೆ. ಜತೆಗೆ “ನಿಷ್ಠಾ-2.0′ ಎಂಬ ಶಿಕ್ಷಕರ ತರ ಬೇತಿ ಕಾರ್ಯಕ್ರಮವನ್ನೂ ಸೇರಿಸಲಾಗಿದೆ ಎಂದರು.

ಕೊರೊನಾದಿಂದ ಭಾರತೀಯ ಶಿಕ್ಷಣ ಪದ್ಧತಿ ಅಭೂತಪೂರ್ವವಾಗಿ ಬದಲಾಗಿದೆ. ಕೋಟ್ಯಂತರ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿ ಗಳಲ್ಲಿ ಪಾಠ ಪ್ರವಚನ ಕೇಳುವುದನ್ನು ಅಭ್ಯಾಸ ಮಾಡಿ ಕೊಂಡಿದ್ದಾರೆ. ಇವೆಲ್ಲವೂ ಭವಿಷ್ಯದಲ್ಲಿ ಹೊಸ ಮಾದರಿಯ ಶಿಕ್ಷಣ ಮತ್ತು ಹೊಸ ಪ್ರತಿಭೆಗಳ ಸೃಷ್ಟಿಗೆ ನಾಂದಿ ಹಾಡಲಿದೆ ಎಂದು ಅವರು ಆಶಿಸಿದರು.

ಕನ್ನಡದಲ್ಲೂ  ಎ.ಐ. ಅಧ್ಯಯನ :

ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಎ.ಐ.- ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌) ಯನ್ನು ಸರ್ಟಿಫಿಕೆಟ್‌ ಕೋರ್ಸ್‌ಗಳ ಮೂಲಕ ಕಲಿಸುವ ವಿಭಿನ್ನ ಸಾಹಸಕ್ಕೆ  ಕೈ ಹಾಕ ಲಾಗಿದೆ. ಇದಕ್ಕಾಗಿ “ಎ.ಐ. ಫಾರ್‌ ಆಲ್‌’ ಎಂಬ ಯೋಜನೆ ಆರಂಭಿಸಲಾಗುತ್ತದೆ. ಆಸಕ್ತ ಸಾಮಾನ್ಯರಿಗೂ ಈ ಕೋರ್ಸ್‌ ಲಭ್ಯ ವಿರಲಿದೆ. ಮೊದಲ ವರ್ಷದಲ್ಲೇ 10 ಲಕ್ಷ ಮಂದಿಗೆ ಎ.ಐ. ತಂತ್ರ ಜ್ಞಾನ ಕಲಿಸುವ ಗುರಿ ಹೊಂದಲಾಗಿದೆ. ತರಗತಿ ಗಳು, ಟಾಕ್‌ ಬ್ಯಾಕ್‌ ವ್ಯವಸ್ಥೆಯಡಿ ಪ್ರಶ್ನೋ ತ್ತರಕ್ಕೆ ಅವಕಾಶ, ಪಠ್ಯಪುಸ್ತಕ, ನೋಟ್ಸ್‌ ಎಲ್ಲವೂ ಲಭ್ಯವಿರಲಿವೆ. 11 ಪ್ರಾದೇಶಿಕ ಭಾಷೆ ಗಳಲ್ಲಿ ಇದು ಲಭ್ಯ ಎಂಬುದು ವಿಶೇಷ. ಎ.ಐ. ಬಗ್ಗೆ ಅರಿವು ಮೂಡಿಸುವ ವಿಶ್ವದ ಅತೀ ದೊಡ್ಡ ಯೋಜನೆ ಎಂಬ ಹೆಗ್ಗಳಿಕೆ ಇದಕ್ಕಿದೆ. ಇದರ ಅನುಷ್ಠಾನ, ಉಸ್ತುವಾರಿ ಸಿಬಿಎಸ್‌ಇಗೆ ವಹಿಸಲಾಗಿದೆ. ಇದಕ್ಕಾಗಿ ಪ್ರತ್ಯೇಕ ವೆಬ್‌ಸೈಟ್‌ ಆರಂಭಿಸುವುದಾಗಿ ಮೋದಿ ತಿಳಿಸಿದ್ದಾರೆ.

ಸಂಜ್ಞಾ ಭಾಷಾಧ್ಯಯನ:

ಮಾತು ಬಾರದವರು ಮತ್ತು ಕಿವಿ ಕೇಳದವರು ಸಂವಹನ ನಡೆಸುವ ಸಂಜ್ಞಾ ಭಾಷೆಯನ್ನು ಅಧ್ಯಯನ ಭಾಷೆಯಾಗಿ ಘೋಷಿಸಿರುವುದು ಇದೇ ಮೊದಲು. ಕನ್ನಡ, ಇಂಗ್ಲಿಷ್‌, ಹಿಂದಿಯಂತೆ ಇದನ್ನೂ ಒಂದು ಭಾಷೆಯಾಗಿ ಶಾಲಾ ಮಟ್ಟದಲ್ಲೇ ಕಲಿಸಲು ನಿರ್ಧರಿಸಲಾಗಿದೆ.  ಮುಂದೆ ಇದು ಕಿವುಡ ಮತ್ತು ಮೂಗರಿಗಾಗಿ  ಪ್ರತ್ಯೇಕ ಶಾಲೆ, ಕಾಲೇಜುಗಳ ಸ್ಥಾಪನೆಗೂ ಕಾರಣವಾಗಬಹುದು. ಭಾರತೀಯ ಸಂಜ್ಞಾ ಭಾಷೆ ಬೆಳವಣಿಗೆಗೂ  ಸಹಕಾರಿ ಯಾದೀತೆಂದು ಮೋದಿ ಹೇಳಿದ್ದಾರೆ.

ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್‌ (ಎಬಿಸಿ) :

ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ತಂತ್ರಜ್ಞಾನ ಆಧಾರಿತ ಅಕಾಡೆಮಿಕ್‌ ಬ್ಯಾಂಕ್‌ ಆಫ್ ಕ್ರೆಡಿಟ್‌ (ಎಬಿಸಿ) ಎಂಬ ಹೊಸ ಯೋಜನೆ ಜಾರಿಗೊಳ್ಳಲಿದೆ. ಇದರಿಂದ ವಿದ್ಯಾರ್ಥಿಗಳು ಯಾವುದೇ ಕೋರ್ಸ್‌ಗೆ ಯಾವಾಗ ಬೇಕಾದರೂ ಸೇರಬಹುದು. ಅರ್ಧದಲ್ಲಿ ಬಿಟ್ಟು ಹೋದರೂ ಮತ್ತೆ ಆ ಕೋರ್ಸ್‌ಗೆ  ಸೇರಿ ಮುಂದುವರಿಸಲು ಈ ಯೋಜನೆ ಅನುವು ಮಾಡಿಕೊಡುತ್ತದೆ. ಇದರೊಂದಿಗೆ 3, 4, 5ನೇ ತರಗತಿಗಳ ವಿದ್ಯಾರ್ಥಿಗಳಿಗಾಗಿ ಜಾರಿಗೊಳ್ಳ ಲಿರುವ “ಸ್ಟ್ರಕ್ಚರ್ಡ್‌ ಅಸೆಸ್ಮೆಂಟ್‌ ಫಾರ್‌ ಅನಲೈಸಿಂಗ್‌ ಲರ್ನಿಂಗ್‌ ಲೆವೆಲ್ಸ್‌’ (ಸಫ‌ಲ್‌) ಎಂಬ ಆಂತರಿಕ ಮೌಲ್ಯ ಮಾಪನ ಪದ್ಧತಿಯಿಂದ ವಿದ್ಯಾರ್ಥಿಗಳ ಪರೀಕ್ಷಾ ಭಯ ಮಾಯವಾಗಿ ಅವರಲ್ಲಿ ಕಲಿಕೆಯ ಉತ್ಸಾಹ ಮೂಡುತ್ತದೆ  ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.

ಘೋಷಣೆಯಾದ ಇತರ ಯೋಜನೆಗಳು :

ವಿದ್ಯಾ ಪ್ರಕಾಶ್‌: ಇದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) ರೂಪಿಸಿರುವ ಪ್ರಾಥಮಿಕ ಶಿಕ್ಷಣ ಪದ್ಧತಿ. ಎಳೆಯ ಮಕ್ಕಳಿಗಾಗಿ ಇದನ್ನು ವಿಶೇಷವಾಗಿ ರೂಪಿಸಲಾಗಿದೆ. ಶಾಲೆಗೆ ಸೇರುವ ಮುನ್ನ ಮೂರು ತಿಂಗಳು ಈ ಯೋಜನೆಯಲ್ಲಿ ಮಕ್ಕಳು ಪಾಲ್ಗೊಳ್ಳಬೇಕು. ಅಲ್ಲಿ ಅಕ್ಷರ ಮತ್ತು ಅಂಕಿಗಳ ಜ್ಞಾನ ಪಡೆದು ಅನಂತರ ಪ್ರಾಥಮಿಕ ಶಾಲೆಗಳಿಗೆ ಸೇರಿಸಲು ಇದು ಅನುವು ಮಾಡಿಕೊಡುತ್ತದೆ.

ಪ್ರಾಂತೀಯ ಭಾಷೆಗಳಲ್ಲಿ ಉನ್ನತ ಶಿಕ್ಷಣ: ಉನ್ನತ ಶಿಕ್ಷಣ, ಅದರಲ್ಲೂ ತಾಂತ್ರಿಕ ಶಿಕ್ಷಣವೂ ಮಾತೃಭಾಷೆಯಲ್ಲಿ ಸಿಗುವಂತಾಗ ಬೇಕೆಂಬ ಮಹದಾಶಯದೊಂದಿಗೆ ಇದೇ ಮೊದಲ ಬಾರಿಗೆ ದೇಶದ 8 ರಾಜ್ಯಗಳ 14 ತಾಂತ್ರಿಕ ಕಾಲೇಜುಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಎಂಜಿನಿಯರಿಂಗ್‌ ಪದವಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಕನ್ನಡ ಸಹಿತ ಒಟ್ಟು 11 ಭಾಷೆಗಳನ್ನು ಇದರ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಲಾಗಿದೆ. ಆರಂಭಿಕ ಹಂತದಲ್ಲಿ ಹಿಂದಿ, ತಮಿಳು, ತೆಲುಗು, ಮರಾಠಿ ಹಾಗೂ ಬಂಗಾಲಿ ಭಾಷೆಗಳಲ್ಲಿ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಲ್ಲೇ ಇದು ಜಾರಿಯಾಗಲಿದೆ.

ಎನ್‌ಇಟಿಎಫ್:  ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶ

ದಿಂದ “ನ್ಯಾಷನಲ್‌ ಎಜುಕೇಶನ್‌ ಟೆಕ್ನಾಲಜಿ ಫೋರಂ’ (ಎನ್‌ಇಟಿಎಫ್) ಎಂಬ ಸ್ವಾಯತ್ತ ಯೋಜನೆಯೊಂದನ್ನು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವುದು, ಶೈಕ್ಷಣಿಕ ಯೋಜನೆಗಳು, ಶೈಕ್ಷಣಿಕ ಆಡಳಿತ ಮತ್ತು ಇನ್ನಿತರ ಸುಧಾರಣ ಕ್ರಮಗಳನ್ನು ಜಾರಿಗೊಳಿಸುವುದು ಈ ಯೋಜನೆಯ ಉದ್ದೇಶ.

ಸದೃಢ ದೇಶವನ್ನು  ಕಟ್ಟುವ ನಿಟ್ಟಿನಲ್ಲಿ  ಸರಕಾರ ಕೈಗೊಂಡಿರುವ ಮಹಾಯಜ್ಞದಲ್ಲಿ  ರಾಷ್ಟ್ರೀಯ ಶಿಕ್ಷಣ ನೀತಿಯೂ ಒಂದು ಪ್ರಮುಖ ವಿಚಾರವಾಗಿದೆ. ಇಂದು ನಾವು ಮಕ್ಕಳಿಗೆ, ಯುವ ಸಮೂಹಕ್ಕೆ ಯಾವ ವಿದ್ಯಾಭ್ಯಾಸ ಕೊಡುತ್ತೇವೋ ಅದರ ಮೇಲೆ ನಮ್ಮ ರಾಷ್ಟ್ರದ ಭವಿಷ್ಯ ನಿಂತಿರುತ್ತದೆ. – ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.