![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
ವೇಟಿಂಗ್ ಲಿಸ್ಟ್ನ ಪ್ರಯಾಣಿಕರಿಗೆ ಸಿಹಿಸುದ್ದಿ
ಹೆಚ್ಚುವರಿ ಪ್ರಯಾಣಿಕರಿಗೆಂದೇ ಕ್ಲೋನ್ ಟ್ರೈನ್ ಸೌಲಭ್ಯ 15 ದಿನಗಳಲ್ಲಿ ಆದೇಶ ಪ್ರಕಟ: ರೈಲ್ವೇ ಮಂಡಳಿ
Team Udayavani, Sep 9, 2020, 12:31 AM IST
![ವೇಟಿಂಗ್ ಲಿಸ್ಟ್ನ ಪ್ರಯಾಣಿಕರಿಗೆ ಸಿಹಿಸುದ್ದಿ](https://www.udayavani.com/wp-content/uploads/2020/09/TRAIN-2-620x347.jpg)
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ ಇಲ್ಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡುವ ಮಾರ್ಗಗಳಲ್ಲಿ ಹೆಚ್ಚಿನ ರೈಲುಗಳನ್ನು ಓಡಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಯಾವ ಮಾರ್ಗಗಳಲ್ಲಿ ವೇಟಿಂಗ್ ಲಿಸ್ಟ್ನಲ್ಲಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆಯೋ, ಅಂಥ ಮಾರ್ಗಗಳಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲಾಗುತ್ತದೆ. ಈ ವ್ಯವಸ್ಥೆಯನ್ನು “ಕ್ಲೋನ್ ಟ್ರೈನ್’ ಎಂದು ಕರೆಯಲಾಗುತ್ತದೆ.
ಮುಂದಿನ 15 ದಿನಗಳಲ್ಲೇ ಹಂತ ಹಂತವಾಗಿ ಈ ಯೋಜನೆ ಜಾರಿಗೆ ಬರಲಿದೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ವೈ.ಕೆ.ಯಾದವ್ ತಿಳಿಸಿದ್ದಾರೆ. ನಿಗದಿತ ರೈಲುಗಳಿಗೆ ಬೇಡಿಕೆ ಇರುವಲ್ಲಿ ಹೆಚ್ಚುವರಿಯಾಗಿ ರೈಲು ಓಡಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವಂತೆ ಮಾಡಲಾಗುತ್ತದೆ. ಆದರೆ, ಈ ರೈಲುಗಳಿಗೆ ಎಲ್ಲ ನಿಲ್ದಾಣಗಳಲ್ಲೂ ನಿಲುಗಡೆ ಇರುವುದಿಲ್ಲ. ನಿಗದಿತ ರೈಲಿನ ಸಂಚಾರ ಆರಂಭವಾಗುವ ಮುನ್ನವೇ ಕ್ಲೋನ್ ರೈಲುಗಳು ಸಂಚರಿಸಲಿದ್ದು, ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆಯಿರಲಿದೆ ಎಂದು ಅವರು ಹೇಳಿದ್ದಾರೆ.
ಕ್ಲೋನ್ ರೈಲು ವ್ಯವಸ್ಥೆಯಲ್ಲಿ ಒಂದೇ ಹೆಸರಲ್ಲಿ ಮತ್ತೂಂದು ರೈಲನ್ನು ಹೆಚ್ಚುವರಿಯಾಗಿ ಓಡಿಸಲಾಗುತ್ತದೆ. ಉದಾಹರಣೆಗೆ, 12423/12424 ಹೊಸದಿಲ್ಲಿ – ದಿಬ್ರೂಗಢ ರಾಜಧಾನಿ ಎಕ್ಸ್ಪ್ರೆಸ್ ನಲ್ಲಿ ಇರುವ ಎಲ್ಲಾ ಸೀಟ್ಗಳು ಕಾಯ್ದಿರಿಸಿದ್ದರೆ, ರೈಲ್ವೇ ಇಲಾಖೆಯು ಅದೇ ಹೆಸರಿನ ಮತ್ತೂಂದು ರೈಲನ್ನು ಓಡಿಸುತ್ತದೆ. ಆದರೆ ಇಂಥ ವ್ಯವಸ್ಥೆಯನ್ನು ಶುರು ಮಾಡಲು ಹೆಚ್ಚುವರಿ ರೈಲುಗಳ ಅಗತ್ಯತೆಯೂ ಸರಕಾರಕ್ಕೆ ಇದೆ.
ಟಾಪ್ ನ್ಯೂಸ್
![Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ](https://www.udayavani.com/wp-content/uploads/2024/07/Gangolli-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.