ಕೋರ್ಟ್ ನಿಂದನೆ ಪ್ರಕರಣ: ಜ|ಕರ್ಣನ್ ವಿರುದ್ಧ ವಾರೆಂಟ್ ಜಾರಿ
Team Udayavani, Mar 10, 2017, 11:43 AM IST
ಹೊಸದಿಲ್ಲಿ : ಕೋರ್ಟ್ ನಿಂದನೆಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗಲು ವಿಫಲರಾಗಿರುವ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಸಿ ಎಸ್ ಕರ್ಣನ್ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.
ಈ ವಾರಂಟನ್ನು ಕರ್ಣನ್ ಅವರಿಗೆ ತಲುಪಿಸಿ ಅವರನ್ನು ಮಾರ್ಚ್ 31ರಂದು ತನ್ನ ಎದುರು ಹಾಜರು ಪಡಿಸುವಂತೆ ಸುಪ್ರೀಂ ಕೋರ್ಟ್ ಕೋಲ್ಕತಾ ಪೊಲೀಸ್ ಮುಖ್ಯಸ್ಥರಿಗೆ ಆದೇಶ ಹೊರಡಿಸಿದೆ.
ಜಸ್ಟಿಸ್ ಕರ್ಣನ್ ವಿರುದ್ಧದ ಆರೋಪಿತ ಅನುಚಿತ ವರ್ತನೆಯ ಪ್ರಕರಣದ ವಿಚಾರಣೆಯನ್ನು ಭಾರತದ ಶ್ರೇಷ್ಠ ನ್ಯಾಯಮೂರ್ತಿ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ನಡೆಸಲಿದೆ.
ಜಸ್ಟಿಸ್ ಕರ್ಣನ್ ಅವರು ದೇಶದ ಹಲವು ಹಾಲಿ ಹಾಗೂ ಮಾಜಿ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಮದ್ರಾಸ್ ಹೈಕೋರ್ಟಿನ ಹಾಲಿ ನ್ಯಾಯಾಧೀಶರ ಪತ್ನಿಯು ಜಸ್ಟಿಸ್ ಕರ್ಣನ್ ತನ್ನ ಪತಿಯ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ತಮ್ಮ ಕುಟುಂಬಕ್ಕೆ ಕಿರುಕುಳ ನೀಡಿದ್ದಾರೆ ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೂಡ ಸುಪ್ರೀಂ ಕೋರ್ಟ್ ಕೈಗೊಳ್ಳಲಿದೆ.
ದೇಶದ ನ್ಯಾಯಾಂಗ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೈಕೋರ್ಟಿನ ಹಾಲಿ ನ್ಯಾಯಾಧೀಶರ ವಿರುದ್ಧ ಕೋರ್ಟ್ ನಿಂದನೆಯ ಪ್ರಕರಣ ದಾಖಲಾಗಿದ್ದು ಜಸ್ಟಿಸ್ ಕರ್ಣನ್ ಅವರನ್ನು ಕಳೆದ ಫೆಬ್ರವರಿಯಲ್ಲಿ ತನ್ನ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಈಗಾಗಲೇ ಜಸ್ಟಿಸ್ ಕರ್ಣನ್ ಅವರ ಕೈಯಿಂದ ನ್ಯಾಯಾಂಗ ಮತ್ತು ಆಡಳಿತಾತ್ಮಕ ಕಾರ್ಯಭಾರವನ್ನು ಹಿಂಪಡೆದುಕೊಂಡಿದೆ.
ಸುಪ್ರೀಂ ಕೋರ್ಟಿಗೆ ಬರೆದ ಪತ್ರದಲ್ಲಿ ಜಸ್ಟಿಸ್ ಕರ್ಣನ್ ಅವರು ತಾನೋರ್ವ ದಲಿತನಾಗಿರುವುದಕ್ಕೆ ತನ್ನನ್ನು ಬಲಿಪಶುವನ್ನಾಗಿ ಮಾಡಲಾಗುತ್ತಿದೆ ಎಂದು ದೂರಿದ್ದರು.
ಜಸ್ಟಿಸ್ ಕರ್ಣನ್ ವಿರುದ್ಧ ಸಹೋದ್ಯೋಗಿ ನ್ಯಾಯಾಧೀಶರು ದೂರು ಸಲ್ಲಿಸಿದ ಕಾರಣ, ಕರ್ಣನ್ ಅವರನ್ನು ಮದ್ರಾಸ್ ಹೈಕೋರ್ಟಿನಿಂದ ಕಲ್ಕತಾ ಹೈಕೋರ್ಟಿಗೆ ವರ್ಗಾಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.