![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 2, 2022, 10:41 AM IST
ಗುವಾಹಟಿ(ಅಸ್ಸಾಂ):ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿರುವುದು ಯಾವುದೇ ಸೈದ್ಧಾಂತಿಕ ಬದಲಾವಣೆಯ ಉದ್ದೇಶವಾಗಿರಲಿಲ್ಲ. ಆದರೆ ನಾನು ನನ್ನ ಜೀವನದ 22 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದಿದ್ದು ವ್ಯರ್ಥ ಎನಿಸಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿ:ತೆರಗೆ ಬಂತು ದಿಗಂತ್- ಅನಂತ್ ನಾಗ್ ಅಭಿನಯದ “ತಿಮ್ಮಯ್ಯ ಅಂಡ್ ತಿಮ್ಮಯ್ಯ”
ಕಾಂಗ್ರೆಸ್ ಪಕ್ಷದಲ್ಲಿ ನಾವು ಒಂದು ಕುಟುಂಬವನ್ನು ಪೂಜಿಸಲು ಬಳಕೆಯಾಗುತ್ತೇವೆ, ಬಿಜೆಪಿಯಲ್ಲಿ ನಾವು ದೇಶವನ್ನು ಪೂಜಿಸುತ್ತೇವೆ ಎಂದು ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಶರ್ಮಾ ಅಸ್ಸಾಂನಲ್ಲಿ ಕಾಂಗ್ರೆಸ್ ನಲ್ಲಿ ಸಚಿವರಾಗಿದ್ದರು. 2015ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸಚಿವರಾಗಿ ಕಾರ್ಯನಿರ್ವಹಿಸಿದ್ದ ಹಿಮಂತ್ ಬಿಸ್ವಾ ಇಂದು ಅಸ್ಸಾಂ ಮುಖ್ಯಮಂತ್ರಿಯಾಗಿದ್ದಾರೆ.
ಸಂದರ್ಶನದಲ್ಲಿ ಹಿಮಂತ್, ಗಲಭೆ, ಮತಾಂತರ, ಹಿಂದು ಯುವತಿಯರ ದುರಂತ ಅಂತ್ಯ, ಇನ್ನಿತರ ಅಪರಾಧ ಕೃತ್ಯಗಳ ಕುರಿತು ಬಿಜೆಪಿಯ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಎಲ್ಲಾ ಸಮುದಾಯಗಳಲ್ಲಿ ಇದೇ ರೀತಿಯ ಅಪರಾಧಗಳು ವರದಿಯಾದರೆ ಯಾವ ಆಧಾರದ ಮೇಲೆ ಶಿಕ್ಷೆ ಕೊಡುವ ಬಗ್ಗೆ ತೀರ್ಮಾನಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಸ್ವಾಸ್, ಪ್ರೀತಿಸಿ ಮತಾಂತರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ವ್ಯಾಖ್ಯಾನಿಸುವ ಸಮಯ ಬಂದಿದೆ. ಈ ಬಗ್ಗೆ ನಮ್ಮ ರಾಜ್ಯಗಳಲ್ಲಿ ಹಲವಾರು ಸಾಕ್ಷ್ಯಗಳಿವೆ ಎಂದು ತಿಳಿಸಿದ್ದಾರೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.