![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 23, 2023, 4:10 PM IST
ನವದೆಹಲಿ: ನಕಲಿ ದಾಖಲೆಗಳನ್ನು ಆಧರಿಸಿ ನೇಪಾಳದ ನಾಗರಿಕರಿಗೆ ಪಾಸ್ಪೋರ್ಟ್ಗಳನ್ನು ವಿತರಿಸಿದ ದಂಧೆಗೆ ಸಂಬಂಧಿಸಿದಂತೆ ಕೋಲ್ಕತ್ತಾದ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಯ ನಾಲ್ವರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಅಧಿಕಾರಿಗಳು – ಹಿರಿಯ ಪಾಸ್ಪೋರ್ಟ್ ಸಹಾಯಕರಾದ ಉತ್ತಮ್ ಕುಮಾರ್, ದೇಬಾಸಿಸ್ ಭಟ್ಟಾಚಾರ್ಯ , ನಿಶಿತ್ ಬರನ್ ಸಹಾ ಮತ್ತು ಸ್ಟೆನೋಗ್ರಾಫರ್ ಮನೀಶ್ ಕುಮಾರ್ ಗುಪ್ತಾ ಅವರನ್ನು ಇತ್ತೀಚೆಗೆ ಗ್ಯಾಂಗ್ಟಾಕ್ನ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಅ. 25 ರವರೆಗೆ ಸಿಬಿಐ ಕಸ್ಟಡಿಗೆ ನೀಡಲಾಗಿದೆ ಎಂದು ಅವರು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಈ ಹಿಂದೆ ಇಬ್ಬರು ಆರ್ಪಿಒ ಅಧಿಕಾರಿಗಳು ಮತ್ತು ನಾಲ್ವರು ಏಜೆಂಟರನ್ನು ಬಂಧಿಸಿತ್ತು. ಅಧಿಕಾರಿಗಳು ದೊಡ್ಡ ಮೊತ್ತದ ಲಂಚ ಪಡೆದು ಬದಲಾಗಿ ನೇಪಾಳದ ನಾಗರಿಕರಿಗೆ ಎರಡು ತಿಂಗಳಲ್ಲಿ ಸ್ಥಳೀಯರು ಎಂದು ತೋರಿಸುವ ನಕಲಿ ಭಾರತೀಯ ಗುರುತಿನ ಚೀಟಿಗಳನ್ನು ತಯಾರಿಸಿ ಅವುಗಳ ಆಧಾರದ ಮೇಲೆ ನೇಪಾಳಿಗರಿಗೆ 60 ಪಾಸ್ಪೋರ್ಟ್ ಅರ್ಜಿಗಳನ್ನು ನೀಡುವ ದಂಧೆಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.