MNC Company: ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

ಬೆಂಗಳೂರು ಮಳೆ ನಿರ್ವಹಣೆ ವೈಫ‌ಲ್ಯದ ವಿರುದ್ಧ ಮೋಹನ್‌ದಾಸ್‌ ಪೈ ಟೀಕೆ

Team Udayavani, Oct 25, 2024, 12:57 AM IST

ಬೆಂಗಳೂರು ಬಿಡಿ, ಆಂಧ್ರಕ್ಕೆ ಬನ್ನಿ: ನಾಯ್ಡು ಪುತ್ರ ಕ್ಯಾತೆ

ಅಮರಾವತಿ: ಈ ಹಿಂದೆ ಜುಲೈಯಲ್ಲಿ ಉದ್ಯೋಗ ಮೀಸಲು ಬಗ್ಗೆ ಚರ್ಚೆ ಏರ್ಪಟ್ಟಿದ್ದಾಗ ಬೆಂಗಳೂರಿನಲ್ಲಿರುವ ಬಹುರಾಷ್ಟ್ರೀಯ ಕಂಪೆನಿಗಳನ್ನು (ಎಂಎನ್‌ಸಿ)ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಆಹ್ವಾನಿಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಸಚಿವ ನಾರಾ ಲೋಕೇಶ್‌ ವಿವಾದ ಸೃಷ್ಟಿಸಿದ್ದರು. ಇದೀಗ ಮತ್ತೆ ಅದೇ ರೀತಿ ಆಹ್ವಾನ ಮಾಡಿರುವ ನಾರಾ ಲೋಕೇಶ್‌ ಮತ್ತೆ ವಿವಾದವೆಬ್ಬಿಸಿದ್ದಾರೆ.

ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಿರ್ವಹಣೆಯಲ್ಲಿ ಕರ್ನಾಟಕ ಸರಕಾರ ವಿಫ‌ಲವಾಗಿದೆ ಎಂದು ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ(ಐಎಫ್ಒ) ಮೋಹನ್‌ದಾಸ್‌ ಪೈ ಟೀಕಿಸಿ ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ನಾರಾ ಲೋಕೇಶ್‌, ನಮಸ್ಕಾರ ಮೋಹನ್‌ದಾಸ್‌ ಪೈ ಸರ್‌. ಬೆಂಗಳೂರಿನಲ್ಲಿರುವ ಎಲ್ಲ ಎಂಎನ್‌ಸಿಗಳಿಗೂ ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ನಾವು ಆಹ್ವಾನ ನೀಡುತ್ತಿದ್ದೇವೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ವ್ಯಾಪಾರ ಸ್ನೇಹಿ ನೀತಿಗಳನ್ನು ರಾಜ್ಯದಲ್ಲಿ ಪರಿಚಯಿಸಿದ್ದಾರೆ. ಉದ್ಯಮಗಳು ನಮ್ಮ ರಾಜ್ಯದ ಕಲ್ಯಾಣ ಹಾಗೂ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಾವು ತಿಳಿದಿದ್ದೇವೆ.

ಎಂಎನ್‌ಸಿಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯ ನೀಡಲು ಹಾಗೂ ಉತ್ತಮ ವ್ಯಾಪಾರಕ್ಕೆ ನೆರವಾಗುವ ವಾತಾವರಣ ಸೃಷ್ಟಿಸಲು ನಾವು ಸಿದ್ಧರಿದ್ದೇವೆ ಎಂದಿದ್ದಾರೆ.

ಅಭಿವೃದ್ಧಿ ಕಡೆ ಗಮನ ಹರಿಸಿ ಎಂದ ಪೈ
ನಾರಾ ಲೋಕೇಶ್‌ ಅವರ ಆಹ್ವಾನವನ್ನು ನಯವಾಗಿ ತಿರಸ್ಕರಿಸಿರುವ ಮೋಹನ್‌ದಾಸ್‌ ಪೈ, ಆಂಧ್ರಪ್ರದೇಶವು ಇನ್ನೂ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಹಿಂದಿನ ಜಗನ್‌ ರೆಡ್ಡಿ ನೇತೃತ್ವದ ಸರಕಾರ ರಾಜಧಾನಿ ಅಮರಾವತಿಯ ಅಭಿವೃದ್ಧಿಯನ್ನು ಅವಗಣಿಸಿದ್ದು, ರಾಜ್ಯದ ಮೇಲಿನ ನಂಬಿಕೆ ಕುಗ್ಗಿಸಿದೆ. ಹಿಂದಿನ ಸರಕಾರದಿಂದಾದ ಹಾನಿಯನ್ನು ಸರಿಪಡಿಸಿಕೊಂಡ ಬಳಿಕ ಆಂಧ್ರ ಬೃಹತ್‌ ಹೂಡಿಕೆದಾರರನ್ನು ಆಕರ್ಷಿಸಬಹುದಾಗಿದೆ.

ಅಮರಾವತಿ ಅಭಿವೃದ್ಧಿಯೆಡೆಗೆ ಗಮನ ಹರಿಸಿದರೆ ಹಿಂದಿನ ಸರಕಾರದಿಂದ ಕುಗ್ಗಿದ್ದ ನಂಬಿಕೆ ಮತ್ತೆ ಬರಬಹುದು. ಬಳಿಕ ಎಂಎನ್‌ಸಿಗಳು ಸ್ಥಳಾಂತರದ ಬಗ್ಗೆ ಚಿಂತಿಸಲಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.